ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಹೋಬಳಿ ಚನ್ನಮಲ್ಲಿಪುರ ನಿವಾಸಿ ಗುರುಪ್ರಸಾದ್ ಬಿ ಅವರನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ನಿರ್ದೇಶಕರನ್ನಾಗಿ ಮತ್ತು ಬೆಳಗಾವಿಯ ರಾಮತೀರ್ಥ ನಗರದ ಅಣ್ಣಾಸಾಹೇಬ ಅಪ್ಪಾಸಾಹೇಬ ದೇಸಾಯಿ ಅವರನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ನಿರ್ದೇಶಕರ ಹುದ್ದೆಗೆ ನೇಮಕ ಮಾಡಲಾಗಿದೆ.