‘ಹೊಸಪೇಟೆಯ ಪ್ರಶಾಂತ್, ನಗರದ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಹೆಬ್ಬಗೋಡಿಯಲ್ಲಿ ವಾಸವಿದ್ದ. ಈತ, ಎರಡು ಮದುವೆಯಾಗಿದ್ದ. ಇಬ್ಬರೂ ಪತ್ನಿಯರು ವಿಚ್ಛೇದನ ನೀಡಿ ದೂರವಾಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಪ್ರಶಾಂತ್, ವಿಧಾನಸೌಧಕ್ಕೆ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.