ಪತ್ರಕರ್ತ ವಿ. ವೀರಭದ್ರಪ್ಪ ಬಿಸ್ಲಳ್ಳಿ ರಚಿಸಿರುವ, ‘ಬಾಂಬೆ ರಿಟರ್ನ್ ಡೇಸ್’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ‘ರಾಜ್ಯ ರಾಜಕೀಯದ 21 ತಿಂಗಳ ಘಟನಾವಳಿಗಳನ್ನು ಲೇಖಕರು ಇದರಲ್ಲಿ ಸಮರ್ಥವಾಗಿ ಅನಾವರಣಗೊಳಿಸಿದ್ದಾರೆ. ಕೃತಿಯಲ್ಲಿ ನವಿರಾದ ಭಾಷೆಯಿದೆ, ಎಲ್ಲಿಯೂ ಅತಿರೇಕವಿಲ್ಲ. ಎಲ್ಲ ಘಟನಾವಳಿಗಳನ್ನು ಅತ್ಯಂತ ಆಳವಾಗಿ ವಿಶ್ಲೇಷಣೆ ಮಾಡಿರುವುದು ಆಪ್ತವೆನಿಸುತ್ತದೆ’ ಎಂದರು.