ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಎ ಮೀಸಲಾತಿ ಬಗ್ಗೆ ಬೊಮ್ಮಾಯಿಗೆ ಅಸ್ಪಷ್ಟ ನಿಲುವು: ಮೃತ್ಯುಂಜಯ ಸ್ವಾಮೀಜಿ ಬೇಸರ

ಸರ್ಕಾರದ ವಿರುದ್ಧ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ
Last Updated 28 ಮಾರ್ಚ್ 2022, 19:43 IST
ಅಕ್ಷರ ಗಾತ್ರ

ರಟ್ಟೀಹಳ್ಳಿ (ಹಾವೇರಿ ಜಿಲ್ಲೆ): ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟ ನಿಲುವು ತೋರುತ್ತಿಲ್ಲ. ಸಮಾಜದ ವಿಷಯವಾಗಿ ಅವರು ಮೌನವಹಿಸಿದ್ದಾರೆ’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

ಸೋಮವಾರ ಪಟ್ಟಣದಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಘೋಷಿಸುವಂತೆ ಆಗ್ರಹಿಸಿ ತಹಶೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು.

‘ಮೀಸಲಾತಿ ಕುರಿತ ಸಭೆಯಲ್ಲಿ ಸಮಾಜದ ಮೀಸಲಾತಿ ಹೋರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಬಜೆಟ್‌ ಒಳಗೆ ಸಮಾಜಕ್ಕೆ ಮೀಸಲಾತಿಯನ್ನು ನೀಡುವುದಾಗಿ ಬೊಮ್ಮಾಯಿ ಹೇಳಿದ್ದರು. ಬಜೆಟ್ ಅಧಿವೇಶನ ಮುಕ್ತಾಯವಾಗುವುದರೊಳಗೆ ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಪಡೆದುಕೊಂಡು 2ಎ ಮೀಸಲಾತಿ ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಎರಡು ವರ್ಷಗಳಿಂದ ನಿರಂತರವಾಗಿ ಮೀಸಲಾತಿ ಹೋರಾಟ ನಡೆಸುತ್ತಿದ್ದರೂ, ಸರ್ಕಾರ ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಘೋಷಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT