‘ರೋಗಿಗಳನ್ನು ರಕ್ತದ ಕ್ಯಾನ್ಸರ್ನಿಂದ ಮುಕ್ತ ಮಾಡಲು ಅಸ್ಥಿಮಜ್ಜೆ ಕಸಿ ಸಹಾಯಕ. ಆದರೆ, ಸಂಕೀರ್ಣ ಚಿಕಿತ್ಸೆಗೆ ರೋಗಿಗಳು ಖಾಸಗಿ ಆಸ್ಪತ್ರೆಗಳನ್ನೇ ಹೆಚ್ಚಾಗಿ ಅವಲಂಬಿಸಬೇಕಾಗಿದೆ. ಈಗ ಸಂಸ್ಥೆಯಲ್ಲಿಯೇ ಈ ಕಸಿಯನ್ನು ಒದಗಿಸಲಾಗುತ್ತಿದೆ. ಅಂತರರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನದ ಪ್ರಯುಕ್ತ ಇದಕ್ಕೆ ಚಾಲನೆ ನೀಡಲಾಗುತ್ತಿದೆ’ ಎಂದು ಸಂಸ್ಥೆ ನಿರ್ದೇಶಕ ಡಾ.ಸಿ. ರಾಮಚಂದ್ರ ತಿಳಿಸಿದರು.