ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್ ಚಕ್ರತೀರ್ಥ, ‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಡಿದ ನಾಯಕರು ದೇಶ ವಿಭಜನೆಯನ್ನು ಏಕೆ ಒಪ್ಪಿಕೊಂಡರು ಎಂಬುದು ಇನ್ನೂ ಪ್ರಶ್ನೆಯಾಗಿಯೇ ಕಾಡುತ್ತಿದೆ. ಪಾಕಿಸ್ತಾನವೆಂಬ ದೇಶವನ್ನು ಭಾರತದ ಎರಡು ಹೆಗಲ ಮೇಲೆ ಹೊರೆ ಇಟ್ಟ ಹಾಗೆ ಇಟ್ಟು ಕೈತೊಳೆದುಕೊಂಡು ಬಿಟ್ಟಿದ್ದು ನಮ್ಮ ನಾಯಕರ ದೂರದೃಷ್ಟಿ ಎಂತಹದ್ದು ಎಂಬುದನ್ನು ತೋರಿಸುತ್ತದೆ’ ಎಂದರು.