ಸಿಂದಗಿ (ವಿಜಯಪುರ): ತಾಲ್ಲೂಕಿನ ಕುರಬತಹಳ್ಳಿಯಲ್ಲಿ ಭೀಮಾ ನದಿಯ ಪ್ರವಾಹದಿಂದ ಉಂಟಾಗಿದ್ದ ಕೆಸರಲ್ಲಿ ಗುರುವಾರ ಸಂಜೆ ಸಿಲುಕಿದ್ದ ಮಲ್ಲಿಕಾರ್ಜುನ ಜಗದೀಶ ದೇಸಾಯಿ (12) ಮೃತಪಟ್ಟಿದ್ದಾರೆ.
ಮಲ್ಲಿಕಾರ್ಜುನ ತುಮಕೂರು ಸಿದ್ಧಗಂಗಾ ಮಠದ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ. ಹೊಲಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಸಂಜೀವಕುಮಾರ ದಾಸರ ಭೇಟಿ ನೀಡಿದ್ದಾರೆ.