ಪ್ರಕರಣ ಭೇದಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಪಹರಣಕಾರರು ಗುರುವಾರ ₹ 17 ಕೋಟಿ ಬೇಡಿಕೆ ಇಟ್ಟಿದ್ದರು. ಶುಕ್ರವಾರ ಇದನ್ನು ₹ 10 ಕೋಟಿಗೆ ಇಳಿಕೆ ಮಾಡಿದ್ದು, ಬಿಟ್ ಕಾಯಿನ್ ಮೂಲಕ ಪಾವತಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಕೂಲಂಕಷ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳು ಬಾಲಕನ ಮನೆಯವರ ಪರಿಚಯದವರಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದರು.