<p><strong>ಕೊಪ್ಪಳ:</strong> ‘ಅಪ್ಪನ ಸಾಲ ತೀರಬೇಕಾದರೆ ನೀನು ಬೆತ್ತಲೆ ಪೂಜೆ ಮಾಡಬೇಕು.’ ಎಂದು ಬಾಲಕನೊಬ್ಬನನ್ನು ನಂಬಿಸಿ ಆತನಿಗೆ ಬೆತ್ತಲೆ ಪೂಜೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಘಟನೆ ಕುರಿತು ಭಾನುವಾರ ರಾತ್ರಿ ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳಾದ ಕೊಪ್ಪಳ ತಾಲ್ಲೂಕಿನ ಹಾಸಗಲ್ ಗ್ರಾಮದ ಶರಣಪ್ಪ ತಳವಾರ, ಗಂಗನಾಳ ಗ್ರಾಮದ ವಿರುಪನಗೌಡ ಮತ್ತು ಮೆತಗಲ್ ಗ್ರಾಮದ ಶರಣಪ್ಪ ಓಜನಹಳ್ಳಿ ಎಂಬುವವರನ್ನು ಬಂಧಿಸಲಾಗಿದೆ.</p>.<p><em><strong>ಇದನ್ನೂ ಓದಿ:<a href="https://www.prajavani.net/district/koppal/child-made-naked-march-to-repay-the-loan-taken-by-father-at-koppal-in-a-inhuman-act-977298.html">ಕೊಪ್ಪಳ: ತಂದೆ ಸಾಲ ತೀರಲು ಮಗನಿಗೆ ಬೆತ್ತಲೆ ಪೂಜೆ!</a></strong></em></p>.<p>’ಘಟನೆ ಕುರಿತು ಪ್ರಕರಣ ದಾಖಲಾದ 24 ಗಂಟೆಗಳಲ್ಲಿಯೇ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ತನಿಖೆಯನ್ನು ಗ್ರಾಮೀಣ ವೃತ್ತದ ಸಿಪಿಐಗೆ ವಹಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ಅಪ್ಪನ ಸಾಲ ತೀರಬೇಕಾದರೆ ನೀನು ಬೆತ್ತಲೆ ಪೂಜೆ ಮಾಡಬೇಕು.’ ಎಂದು ಬಾಲಕನೊಬ್ಬನನ್ನು ನಂಬಿಸಿ ಆತನಿಗೆ ಬೆತ್ತಲೆ ಪೂಜೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಘಟನೆ ಕುರಿತು ಭಾನುವಾರ ರಾತ್ರಿ ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳಾದ ಕೊಪ್ಪಳ ತಾಲ್ಲೂಕಿನ ಹಾಸಗಲ್ ಗ್ರಾಮದ ಶರಣಪ್ಪ ತಳವಾರ, ಗಂಗನಾಳ ಗ್ರಾಮದ ವಿರುಪನಗೌಡ ಮತ್ತು ಮೆತಗಲ್ ಗ್ರಾಮದ ಶರಣಪ್ಪ ಓಜನಹಳ್ಳಿ ಎಂಬುವವರನ್ನು ಬಂಧಿಸಲಾಗಿದೆ.</p>.<p><em><strong>ಇದನ್ನೂ ಓದಿ:<a href="https://www.prajavani.net/district/koppal/child-made-naked-march-to-repay-the-loan-taken-by-father-at-koppal-in-a-inhuman-act-977298.html">ಕೊಪ್ಪಳ: ತಂದೆ ಸಾಲ ತೀರಲು ಮಗನಿಗೆ ಬೆತ್ತಲೆ ಪೂಜೆ!</a></strong></em></p>.<p>’ಘಟನೆ ಕುರಿತು ಪ್ರಕರಣ ದಾಖಲಾದ 24 ಗಂಟೆಗಳಲ್ಲಿಯೇ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ತನಿಖೆಯನ್ನು ಗ್ರಾಮೀಣ ವೃತ್ತದ ಸಿಪಿಐಗೆ ವಹಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>