ಬೆಂಗಳೂರು: ಕೋವಿಡ್ ಲಾಕ್ಡೌನ್ ಸಹಾಯಧನ ₹2 ಸಾವಿರ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯಗೊಳಿಸಿರುವ ಷರತ್ತು ಮಾರ್ಪಡಿಸುವುದು ಸೂಕ್ತ ಎಂದು ಹೈಕೋರ್ಟ್ ಹೇಳಿದೆ.
ಮನೆಗೆಲಸದ ಕಾರ್ಮಿಕರಿಗೆ ಸಹಾಯಧನ ನೀಡುವ ವಿಷಯದಲ್ಲಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿದೆ.
2021 ಮೇ 21ರ ಸರ್ಕಾರಿ ಆದೇಶದ ಪ್ರಕಾರ, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಕಾರ್ಮಿಕರಿಗೆ ಈ ಸಹಾಯಧನ ಯೋಜನೆ ಸೀಮಿತಗೊಳಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರದ ಹಲವು ಮನೆಗೆಲಸ ಕಾರ್ಮಿಕರು ಇದ್ದಾರೆ ಎಂದು ಅರ್ಜಿದಾರರು ವಾದಿಸಿದರು.
‘ಕೋವಿಡ್ ಒಂದು ಮತ್ತು ಎರಡನೇ ಅಲೆಯಿಂದಾಗಿ ಸಾಕಷ್ಟು ಮನೆಗೆಲಸ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದಾರೆ. ಎಪಿಎಲ್ ಪಟ್ಟಿಯಲ್ಲಿದ್ದ ಹಲವರು ಈ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಕ್ಕೆ ಹೋಗಿದ್ದಾರೆ. ಹೀಗಾಗಿ ಷರತ್ತು ಮಾರ್ಪಡಿಸಬಹುದು’ ಎಂದು ಪೀಠ ಹೇಳಿತು. ವಿಚಾರಣೆಯನ್ನು ಆ.6ಕ್ಕೆ ಮುಂದೂಡಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.