ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು.