ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದಿಂದ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ. ಸರ್ಕಾರದ ಏಜೆನ್ಸಿಗಳಿಂದ ನಡೆಯುವ ತನಿಖೆಯಿಂದ ಸತ್ಯ ಹೊರ ಬರುತ್ತದೆ ಎಂಬುದನ್ನು ನಿರೀಕ್ಷಿಸಲಾಗದು. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲವೇ ಕರ್ನಾಟಕ ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.