ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಯಲ್ಲಿದ್ದು ನಿವೃತ್ತರಾಗಿರುವ ಪಿ.ಎನ್. ಗಣೇಶ್ ಎಂಬುವವರು ತಮ್ಮ ವೈದ್ಯಕೀಯ ವೆಚ್ಚದ ಬಿಲ್ಲನ್ನು ಮರುಪಾವತಿ ಮಾಡುವಂತೆ ಕೋರಿ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು. ಸಂಬಂಧಿಸಿದ ಅಧಿಕಾರಿಯ ಜತೆ ಮಾತನಾಡಿ, ಬಿಲ್ ಮೊತ್ತ ಮರುಪಾವತಿಗೆ ಮಂಜೂರಾತಿ ಕೊಡಿಸಲು ₹ 20,000 ಲಂಚ ನೀಡುವಂತೆ ಆರೋಪಿ ಬೇಡಿಕೆ ಇಟ್ಟಿದ್ದರು. ಈ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದರು.