ಬೆಂಗಳೂರು ಉತ್ತರ ತಾಲ್ಲೂಕಿನ ಲಗ್ಗೆರೆ ಹೋಬಳಿಯಲ್ಲಿರುವ 30 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ನಿರಾಕ್ಷೇಪಣಾ ಪತ್ರ ಕೋರಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ₹ 2.5 ಲಕ್ಷ ಲಂಚ ಪಡೆದುಕೊಂಡು ಆರೋಪಿಗಳು ನಿರಾಕ್ಷೇಪಣಾ ಪತ್ರ ನೀಡಿದ್ದರು. ಈ ಕುರಿತು ಅರ್ಜಿದಾರರು ಕೆಐಎಡಿಬಿ ಉಪ ಆಯುಕ್ತರಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸುತ್ತಿದ್ದಂತೆ ದೂರುದಾರರನ್ನು ಸಂಪರ್ಕಿಸಿದ್ದ ಆರೋಪಿಗಳು, ದೂರನ್ನು ಹಿಂಪಡೆದರೆ ₹ 2.5 ಲಕ್ಷದೊಂದಿಗೆ ₹ 50,000 ಸೇರಿಸಿ ವಾಪಸ್ ನೀಡುವುದಾಗಿ ಆಮಿಷ ಒಡ್ಡಿದ್ದರು. ದೂರುದಾರರಿಗೆಹಣ ವಾಪಸ್ ನೀಡುತ್ತಿದ್ದಾಗ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.