ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿವಕೋಟೆ ಗ್ರಾಮದ ಪ್ರಕಾಶ್ ಎಂಬುವವರು ಯಲಹಂಕ ಹೋಬಳಿಯಲ್ಲಿ 24 ಗುಂಟೆ ಜಮೀನು ಖರೀದಿಸಿದ್ದರು. ಅದರ ಖಾತೆಯನ್ನು ತನ್ನ ಹೆಸರಿಗೆ ಬದಲಾವಣೆ ಮಾಡಿಕೊಡುವಂತೆ ಯಲಹಂಕ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಯಲಹಂಕ ಹೋಬಳಿಯ ಕಂದಾಯ ನಿರೀಕ್ಷಕ ಪುರುಷೋತ್ತಮ್ ಈ ಅರ್ಜಿಯನ್ನು ಗ್ರಾಮಲೆಕ್ಕಿಗ ಮಹೇಶ್ಗೆ ವರ್ಗಾಯಿಸಿದ್ದರು.