ಕಲಬುರ್ಗಿ: ಕಲ್ಯಾಣ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಕಲಬುರ್ಗಿಜಿಲ್ಲೆಯಲ್ಲಿ ಭೀಮಾ ಹಾಗೂ ಕಾಗಿಣಾ ನದಿಗಳ ಪ್ರವಾಹ ಇಳಿಮುಖವಾಗಿದ್ದು, ಭೀಮಾ ನದಿ ಪ್ರವಾಹದಿಂದ ಮುಳುಗಡೆಯಾಗಿದ್ದ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಹಾಗೂ ಘತ್ತರಗಾ ಬಳಿಯ ಸೇತುವೆಗಳು ಮಧ್ಯಾಹ್ನದ ಬಳಿಕ ವಾಹನ ಸಂಚಾರಕ್ಕೆ ಮುಕ್ತವಾಗಿವೆ.