<p><strong>ಬೆಂಗಳೂರು</strong>: ಎರಡು ವರ್ಷಗಳ ಅಧಿಕಾರ ನಡೆಸಿ ಬಿಎಸ್ ಯಡಿಯೂರಪ್ಪ ಅವರು ಇಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.</p>.<p>ಇದಕ್ಕೂ ಮುನ್ನ ಅವರು ಕೆಲವು ಮಹತ್ವದ ಘೋಷಣೆಗಳನ್ನು ಹೊರಡಿಸಿದರು. ಒಲಿಂಪಿಕ್ಗೆ ರಾಜ್ಯದಿಂದ ಹೋಗಿರುವ ಕ್ರೀಡಾಳುಗಳು ಪದಕ ಗೆದ್ದರೆ ಬಹುಮಾನ ನೀಡುವುದಾಗಿ ಯಡಿಯೂರಪ್ಪ ಪ್ರಕಟಿಸಿದರು.</p>.<p>ಚಿನ್ನದ ಪದಕ ಗೆದ್ದರೆ ₹5 ಕೋಟಿ, ಬೆಳ್ಳಿ ಪದಕ ಗೆದ್ದರೆ ₹3 ಕೋಟಿ ಮತ್ತು ಕಂಚಿನ ಪದಕ ಗೆದ್ದರೆ ₹2 ಕೋಟಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದರು.</p>.<p>ಅಲ್ಲದೇಇತರ ರಾಜ್ಯದ ಕ್ರೀಡಾಳುಗಳು ಚಿನ್ನದ ಪದಕ ಗೆದ್ದರೆ ₹15 ಲಕ್ಷ, ಬೆಳ್ಳಿ ಪದಕ ಗೆದ್ದರೆ ₹10 ಲಕ್ಷ ಮತ್ತು ಕಂಚಿನ ಪದಕ ಗೆದ್ದರೆ ₹5 ಲಕ್ಷ ನೀಡುವುದಾಗಿ ಘೋಷಿಸಿದರು.</p>.<p>ಇದೇ ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ 10.25ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಯಡಿಯೂರಪ್ಪ ಅವರು ಆದೇಶ ಮಾಡಿ ಹೋಗಿದ್ದಾರೆ.</p>.<p>ಇಲ್ಲಿಯವರೆಗೆ ಮೂಲ ವೇತನದ ಶೇ 11.25ರಷ್ಟು ತುಟ್ಟಿಭತ್ಯೆ ಇತ್ತು. ಈಗ ಶೇ 10.25ರಷ್ಟು ಹೆಚ್ಚಳ ಮಾಡಿರುವುದರಿಂದ ಶೇ. 21.50 ರಷ್ಟು ತುಟ್ಟಿಭತ್ಯೆ ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎರಡು ವರ್ಷಗಳ ಅಧಿಕಾರ ನಡೆಸಿ ಬಿಎಸ್ ಯಡಿಯೂರಪ್ಪ ಅವರು ಇಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.</p>.<p>ಇದಕ್ಕೂ ಮುನ್ನ ಅವರು ಕೆಲವು ಮಹತ್ವದ ಘೋಷಣೆಗಳನ್ನು ಹೊರಡಿಸಿದರು. ಒಲಿಂಪಿಕ್ಗೆ ರಾಜ್ಯದಿಂದ ಹೋಗಿರುವ ಕ್ರೀಡಾಳುಗಳು ಪದಕ ಗೆದ್ದರೆ ಬಹುಮಾನ ನೀಡುವುದಾಗಿ ಯಡಿಯೂರಪ್ಪ ಪ್ರಕಟಿಸಿದರು.</p>.<p>ಚಿನ್ನದ ಪದಕ ಗೆದ್ದರೆ ₹5 ಕೋಟಿ, ಬೆಳ್ಳಿ ಪದಕ ಗೆದ್ದರೆ ₹3 ಕೋಟಿ ಮತ್ತು ಕಂಚಿನ ಪದಕ ಗೆದ್ದರೆ ₹2 ಕೋಟಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದರು.</p>.<p>ಅಲ್ಲದೇಇತರ ರಾಜ್ಯದ ಕ್ರೀಡಾಳುಗಳು ಚಿನ್ನದ ಪದಕ ಗೆದ್ದರೆ ₹15 ಲಕ್ಷ, ಬೆಳ್ಳಿ ಪದಕ ಗೆದ್ದರೆ ₹10 ಲಕ್ಷ ಮತ್ತು ಕಂಚಿನ ಪದಕ ಗೆದ್ದರೆ ₹5 ಲಕ್ಷ ನೀಡುವುದಾಗಿ ಘೋಷಿಸಿದರು.</p>.<p>ಇದೇ ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ 10.25ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಯಡಿಯೂರಪ್ಪ ಅವರು ಆದೇಶ ಮಾಡಿ ಹೋಗಿದ್ದಾರೆ.</p>.<p>ಇಲ್ಲಿಯವರೆಗೆ ಮೂಲ ವೇತನದ ಶೇ 11.25ರಷ್ಟು ತುಟ್ಟಿಭತ್ಯೆ ಇತ್ತು. ಈಗ ಶೇ 10.25ರಷ್ಟು ಹೆಚ್ಚಳ ಮಾಡಿರುವುದರಿಂದ ಶೇ. 21.50 ರಷ್ಟು ತುಟ್ಟಿಭತ್ಯೆ ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>