ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ: ಯಡಿಯೂರಪ್ಪ ಘೋಷಣೆ

Last Updated 23 ಡಿಸೆಂಬರ್ 2020, 7:37 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಬುಧವಾರದಿಂದ ಜನವರಿ 2ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಬುಧವಾರ ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಇಡೀ ರಾಜ್ಯಕ್ಕೆ ಈ ಆದೇಶ ಅನ್ವಯವಾಗಲಿದೆ' ಎಂದರು.

ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್ ಟಿ-ಪಿಸಿಆರ್ ವಿಧಾನದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದರು.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT