‘ಮುಂಬರುವ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುತ್ತೇನೆ. ಯಾರೋ ನಾನೇ ಮುಂದಿನ ಮುಖ್ಯಮಂತ್ರಿ ಎಂದು ತಿರುಕನ ಕನಸು ಕಾಣುತ್ತಿದ್ದಾರೆ. ಅದು ಎಂದಿಗೂ ನನಸಾಗದು. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ’ ಎಂದ ಅವರು, ‘ಪಕ್ಷದ ವರಿಷ್ಠರೆಲ್ಲ ಚರ್ಚಿಸಿ ಯೋಗ್ಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು. ಇದಕ್ಕಾಗಿ ಎರಡು ಸಮೀಕ್ಷೆ ನಡೆಸಲಾಗುವುದು. ಟಿಕೆಟ್ ನೀಡುವ ವಿಚಾರದಲ್ಲಿ ರಾಜಿ ಇಲ್ಲ. ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಲಾಗುವುದು’ ಎಂದು ತಿಳಿಸಿದರು.