ಉಸ್ತುವಾರಿ ಎರಡು ದಿನ ಇಲ್ಲೇ ಇದ್ದು ನಮಗೆ ಮಾರ್ಗದರ್ಶನ ಮಾಡಲಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೆ ನಡೆದ ಉಪ ಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ. ಮುಂಬರುವ ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ. ವಾತಾವರಣ ನಮ್ಮ ಪರವಾಗಿದ್ದು ಅಲ್ಲೂ ಗೆಲ್ಲುತ್ತೇವೆ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಳ್ಳಲಾಗುವುದು ಎಂದರು.