ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು. ‘ಇನ್ನೂ ಕೆಲವೇ ದಿನಗಳಲ್ಲೇ ಅಪ್ಪ (ಯಡಿಯೂರಪ್ಪ), ಮಗನ (ವಿಜಯೇಂದ್ರ) ನಿಜ ಬಣ್ಣ ಬಯಲಾಗಲಿದೆ. ವಿಜಯೇಂದ್ರ ಎಷ್ಟು ಲೂಟಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ. ಫೆಡರಲ್ ಬ್ಯಾಂಕ್ ವ್ಯವಹಾರದಲ್ಲಿ ವಿಜಯೇಂದ್ರ ಅವರನ್ನು ಜಾರಿ ನಿರ್ದೇಶನಾಲಯದವರು (ಇ.ಡಿ) ಕರೆದುಕೊಂಡು ಹೋಗಿಲ್ಲ ಎಂದು ಹೇಳಲಿ. ನಾನು ಅವರಿಗೆ ಸವಾಲು ಹಾಕ್ತೇನೆ’ ಎಂದರು.