<p><strong>ಶಿವಮೊಗ್ಗ</strong>: ‘ಆರ್ಎಸ್ಎಸ್ ವಿರುದ್ಧ ಅನವಶ್ಯಕವಾಗಿ ಮಾತನಾಡುತ್ತಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಲೆ ಕೆಟ್ಟಿದೆ. ಹೀಗಾಗಿ, ಸಂಘಟನೆ ವಿರುದ್ಧ ಹುಚ್ಚುಹುಚ್ಚಾಗಿ ಮಾತಾಡುತ್ತಿದ್ದಾರೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕಟಕಿಯಾಡಿದರು.</p>.<p>ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ಮೇಲೇತ್ತಿದ್ದು ಸಿದ್ದರಾಮಯ್ಯ. ಅದು ಅವರದ್ದೇ ಪಾಪದ ಕೂಸು’ ಎಂದು ಟೀಕಿಸಿದರು.</p>.<p>‘ಪಿಎಫ್ಐ ನಿಷೇಧಿಸಿರುವ ಕೇಂದ್ರದ ನಿರ್ಧಾರದ ಪರ ಇಡೀ ದೇಶದ ಜನರು ಇದ್ದಾರೆ. ಹೀಗಾಗಿ ಏನು ಮಾತಾಡಬೇಕು ಎಂದು ತೋಚದೇ ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ. ಪಿಎಫ್ಐ ಈ ಮಟ್ಟಕ್ಕೆ ಬೆಳೆಯಲು ಮೂಲ ಕಾರಣ ಅವರೇ. ಈಗಲಾದರೂ ತಪ್ಪಿನ ಅರಿವಾಗಿ ಪ್ರಾಮಾಣಿಕವಾಗಿ ಯೋಚಿಸುವುದನ್ನು ಬಿಟ್ಟು ಆರ್ಎಸ್ಎಸ್ ಬಗ್ಗೆ ಹಗುರವಾಗಿ ಮಾತಾಡುವುದು ಸರಿಯಲ್ಲ’ ಎಂದು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಿಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ನಾವೆಲ್ಲರೂ ಸಂಘ ಪರಿವಾರದಿಂದಲೇ ಬಂದವರು. ಸಂಘದ ಬಗ್ಗೆ ಸರಿಯಾಗಿ ತಿಳಿಯದೇ ಮಾತನಾಡುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರುವಂತಹದ್ದಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಆರ್ಎಸ್ಎಸ್ ವಿರುದ್ಧ ಅನವಶ್ಯಕವಾಗಿ ಮಾತನಾಡುತ್ತಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಲೆ ಕೆಟ್ಟಿದೆ. ಹೀಗಾಗಿ, ಸಂಘಟನೆ ವಿರುದ್ಧ ಹುಚ್ಚುಹುಚ್ಚಾಗಿ ಮಾತಾಡುತ್ತಿದ್ದಾರೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕಟಕಿಯಾಡಿದರು.</p>.<p>ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ಮೇಲೇತ್ತಿದ್ದು ಸಿದ್ದರಾಮಯ್ಯ. ಅದು ಅವರದ್ದೇ ಪಾಪದ ಕೂಸು’ ಎಂದು ಟೀಕಿಸಿದರು.</p>.<p>‘ಪಿಎಫ್ಐ ನಿಷೇಧಿಸಿರುವ ಕೇಂದ್ರದ ನಿರ್ಧಾರದ ಪರ ಇಡೀ ದೇಶದ ಜನರು ಇದ್ದಾರೆ. ಹೀಗಾಗಿ ಏನು ಮಾತಾಡಬೇಕು ಎಂದು ತೋಚದೇ ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ. ಪಿಎಫ್ಐ ಈ ಮಟ್ಟಕ್ಕೆ ಬೆಳೆಯಲು ಮೂಲ ಕಾರಣ ಅವರೇ. ಈಗಲಾದರೂ ತಪ್ಪಿನ ಅರಿವಾಗಿ ಪ್ರಾಮಾಣಿಕವಾಗಿ ಯೋಚಿಸುವುದನ್ನು ಬಿಟ್ಟು ಆರ್ಎಸ್ಎಸ್ ಬಗ್ಗೆ ಹಗುರವಾಗಿ ಮಾತಾಡುವುದು ಸರಿಯಲ್ಲ’ ಎಂದು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಿಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ನಾವೆಲ್ಲರೂ ಸಂಘ ಪರಿವಾರದಿಂದಲೇ ಬಂದವರು. ಸಂಘದ ಬಗ್ಗೆ ಸರಿಯಾಗಿ ತಿಳಿಯದೇ ಮಾತನಾಡುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರುವಂತಹದ್ದಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>