ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 25ಕ್ಕೆ ಬಿಜೆಪಿ ಶಾಸಕರಿಗೆ ಭೋಜನ ಕೂಟ ಆಯೋಜಿಸಿದ ಸಿಎಂ ಯಡಿಯೂರಪ್ಪ

Last Updated 20 ಜುಲೈ 2021, 18:26 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇದೇ 25 ರಂದು ಶಾಂಗ್ರಿಲಾ ಹೊಟೇಲ್‌ನಲ್ಲಿ ಪಕ್ಷದ ಶಾಸಕರಿಗೆ ಭೋಜನ ಕೂಟ ಏರ್ಪಡಿಸಿದ್ದು, ಹಾಜರಾಗುವಂತೆ ಎಲ್ಲ ಶಾಸಕರಿಗೂ ಅಧಿಕೃತ ಆಹ್ವಾನವನ್ನು ಕಳುಹಿಸಲಾಗಿದೆ.

‘ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿರುವುದರಿಂದ ಶಾಸಕರೊಂದಿಗೆ ಸೌಜನ್ಯದ ಭೇಟಿ ಮತ್ತು ಭೋಜನ ಕೂಟ ಏರ್ಪಡಿಸಲಾಗಿದೆ. ಎಲ್ಲರೂ ತಪ್ಪದೇ ಹಾಜರಾಗಬೇಕು’ ಎಂದು ಸರ್ಕಾರದ ಮುಖ್ಯ ಸಚೇತಕ ವಿ.ಸುನಿಲ್‌ ಕುಮಾರ್‌ ಅವರು ಸಂದೇಶ ಕಳುಹಿಸಿದ್ದಾರೆ. ‘ಅಂದು ಶಾಸಕಾಂಗ ಪಕ್ಷದ ಸಭೆ ನಡೆಯುವುದಿಲ್ಲ. ಮುಖ್ಯಮಂತ್ರಿಯವರು ಸೌಜನ್ಯದ ಮಾತುಕತೆ ನಡೆಸಲಿದ್ದಾರೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT