‘ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿರುವುದರಿಂದ ಶಾಸಕರೊಂದಿಗೆ ಸೌಜನ್ಯದ ಭೇಟಿ ಮತ್ತು ಭೋಜನ ಕೂಟ ಏರ್ಪಡಿಸಲಾಗಿದೆ. ಎಲ್ಲರೂ ತಪ್ಪದೇ ಹಾಜರಾಗಬೇಕು’ ಎಂದು ಸರ್ಕಾರದ ಮುಖ್ಯ ಸಚೇತಕ ವಿ.ಸುನಿಲ್ ಕುಮಾರ್ ಅವರು ಸಂದೇಶ ಕಳುಹಿಸಿದ್ದಾರೆ. ‘ಅಂದು ಶಾಸಕಾಂಗ ಪಕ್ಷದ ಸಭೆ ನಡೆಯುವುದಿಲ್ಲ. ಮುಖ್ಯಮಂತ್ರಿಯವರು ಸೌಜನ್ಯದ ಮಾತುಕತೆ ನಡೆಸಲಿದ್ದಾರೆ’ ಎಂದು ಮೂಲಗಳು ಹೇಳಿವೆ.