ಮೈಸೂರು: ‘ದೇವಾಲಯಗಳ ಕಟ್ಟಡ ತೆರವು ಮಾಡಿದ್ದು ಸರಿಯಲ್ಲ. ಈ ಬಗ್ಗೆ ಮೊದಲು ಚರ್ಚೆ ಮಾಡಬೇಕಿತ್ತು. ಯಾವುದೇ ಕಾರಣಕ್ಕೂ ತೆರವು ಮಾಡಬಾರದು’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲ್ಲಿ ಶುಕ್ರವಾರ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿ.ವೈ.ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮುಂದೆ ಅವರು ಸ್ಪರ್ಧಿಸುವ ಕ್ಷೇತ್ರವೂ ಅಂತಿಮವಾಗಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.