ಶಿವಮೊಗ್ಗ ರಾಜ್ಯದಲ್ಲೇ ಮಾದರಿಯಾಗಿದೆ. ಆರು ತಿಂಗಳಲ್ಲಿ ವಿಮಾನನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ವಿಮಾನ ಹಾರಾಟ ಪ್ರಾರಂಭವಾಗಲಿದೆ. ಕೈಗಾರಿಕೆಗಳ ಹಬ್ ನಿರ್ಮಾಣವಾಗಲಿದೆ, ಹತ್ತಾರು ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ. ಜಿಲ್ಲೆಯ ಅಭಿವೃದ್ಧಿ ಕುರಿತ ತಮ್ಮ ಕನಸು ನನಸಾಗುತ್ತಿದೆ ಎಂದು ಸಂತಸ ಹಂಚಿಕೊಂಡರು.