<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಎರಡನೇ ಹಂತದ ಮೈಸೂರು ರಸ್ತೆ ವಿಸ್ತರಿತ ಮಾರ್ಗವು ಜುಲೈನಲ್ಲಿ ಪ್ರಯಾಣಿಕರ ಸಂಚಾರಕ್ಕೆ ಮುಕ್ತವಾಗಲಿದೆ.7.53 ಕಿ.ಮೀ. ಉದ್ದದ ಈ ಮಾರ್ಗ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿಗೆ ಸಂಪರ್ಕ ಕಲ್ಪಿಸಲಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ₹56 ಹಾಗೂ ಕೆಂಗೇರಿಯಿಂದ ರೇಷ್ಮೆ ಸಂಸ್ಥೆಗೆ ಪ್ರಯಾಣಿಸಲು ₹ 60 ದರ ನಿಗದಿ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರನೂತನ ಸಂಚಾರ ಮಾರ್ಗದ ಪರಿವೀಕ್ಷಣೆ ನಡೆಸಿದ ಬಳಿಕ ಮಾತನಾಡಿದರು.</p>.<p>‘ಈ ಯೋಜನೆಗೆ₹1,560 ಕೋಟಿ ವೆಚ್ಚ ಮಾಡಲಾಗಿದೆ. ಭೂ ಸ್ವಾಧೀನಕ್ಕೆ ₹360 ಕೋಟಿ ವ್ಯಯಿಸಲಾಗಿದೆ. ಈ ಮಾರ್ಗದಿಂದಾಗಿ ಪೂರ್ವ–ಪಶ್ಚಿಮ ಕಾರಿಡಾರ್ ಮಾರ್ಗದ ಉದ್ದವು18.1 ಕಿ.ಮೀ.ಗೆ ಹೆಚ್ಚಿದೆ. ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ನಿಲ್ದಾಣ ಹಾಗೂ ಕೆಂಗೇರಿಯಲ್ಲಿ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ’ ಎಂದರು.</p>.<p>‘ನೂತನ ಮಾರ್ಗದಲ್ಲಿ ‘ಒಂದು ದೇಶ–ಒಂದು ಕಾರ್ಡ್’ ಯೋಜನೆಯ ಅನುಷ್ಠಾನಕ್ಕೆ ಪೂರಕವಾಗಿ ಸ್ವಯಂಚಾಲಿತ ಶುಲ್ಕ ಸಂಗ್ರಹ ವ್ಯವಸ್ಥೆ ಮಾಡಲಾಗಿದೆ. ಈ ಮಾರ್ಗವು ‘ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್’ ಹಾಗೂ ಕ್ಯೂ ಆರ್ ಕೋಡ್ಗೆ ಹೊಂದಿಕೆಯಾಗುವ ಎಎಫ್ಸಿ ವ್ಯವಸ್ಥೆ ಹೊಂದಿರಲಿದೆ. ಪ್ರತಿಯೊಂದು ನಿಲ್ದಾಣದ ಮೇಲ್ಛಾವಣಿಯಲ್ಲಿ250 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಅಳವಡಿಸಲು ವಿನ್ಯಾಸಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಈ ಮಾರ್ಗದಲ್ಲಿ ರೈಲಿನ ಪರೀಕ್ಷಾರ್ಥ ಓಡಾಟ ಪೂರ್ಣಗೊಂಡಿದೆ. ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ನಿಲ್ದಾಣಗಳಲ್ಲಿ ವಾಹನ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಕೆಂಗೇರಿ ಬಸ್ ನಿಲ್ದಾಣದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ನಿಲ್ದಾಣ ಬಿಟ್ಟು ಉಳಿದೆಡೆ ಪ್ರಯಾಣಿಕರು ರಸ್ತೆ ದಾಟಲು ಪಾದಚಾರಿ ಮಾರ್ಗ ಬಳಸಬಹುದು. ವಿಸ್ತರಿತ ಮಾರ್ಗದಿಂದಾಗಿ ಪ್ರತಿದಿನ ಸರಾಸರಿ75 ಸಾವಿರ ಮಂದಿಗೆ ಅನುಕೂಲವಾಗಲಿದೆ. ನಗರದ ಸಂಚಾರ ವ್ಯವಸ್ಥೆಯೂ ಸುಗಮಗೊಳ್ಳಲಿದೆ’ ಎಂದು ತಿಳಿಸಿದರು.</p>.<p>‘ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಿತ ಮಾರ್ಗದ ಕಾಮಗಾರಿಯೂ ಪ್ರಗತಿಯಲ್ಲಿದೆ. ಇದು2022ರ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಯೋಜನೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ನಮ್ಮ ಸರ್ಕಾರ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ. ಕೇಂದ್ರ ಸರ್ಕಾರವು2ಎ,2ಬಿ ಹಂತಗಳ ಮಾರ್ಗಗಳಿಗೆ ಹಸಿರು ನಿಶಾನೆ ತೋರಿದೆ. ಇದರಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೂ ಮೆಟ್ರೊ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಎರಡನೇ ಹಂತದ ಮೈಸೂರು ರಸ್ತೆ ವಿಸ್ತರಿತ ಮಾರ್ಗವು ಜುಲೈನಲ್ಲಿ ಪ್ರಯಾಣಿಕರ ಸಂಚಾರಕ್ಕೆ ಮುಕ್ತವಾಗಲಿದೆ.7.53 ಕಿ.ಮೀ. ಉದ್ದದ ಈ ಮಾರ್ಗ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿಗೆ ಸಂಪರ್ಕ ಕಲ್ಪಿಸಲಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ₹56 ಹಾಗೂ ಕೆಂಗೇರಿಯಿಂದ ರೇಷ್ಮೆ ಸಂಸ್ಥೆಗೆ ಪ್ರಯಾಣಿಸಲು ₹ 60 ದರ ನಿಗದಿ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರನೂತನ ಸಂಚಾರ ಮಾರ್ಗದ ಪರಿವೀಕ್ಷಣೆ ನಡೆಸಿದ ಬಳಿಕ ಮಾತನಾಡಿದರು.</p>.<p>‘ಈ ಯೋಜನೆಗೆ₹1,560 ಕೋಟಿ ವೆಚ್ಚ ಮಾಡಲಾಗಿದೆ. ಭೂ ಸ್ವಾಧೀನಕ್ಕೆ ₹360 ಕೋಟಿ ವ್ಯಯಿಸಲಾಗಿದೆ. ಈ ಮಾರ್ಗದಿಂದಾಗಿ ಪೂರ್ವ–ಪಶ್ಚಿಮ ಕಾರಿಡಾರ್ ಮಾರ್ಗದ ಉದ್ದವು18.1 ಕಿ.ಮೀ.ಗೆ ಹೆಚ್ಚಿದೆ. ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ನಿಲ್ದಾಣ ಹಾಗೂ ಕೆಂಗೇರಿಯಲ್ಲಿ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ’ ಎಂದರು.</p>.<p>‘ನೂತನ ಮಾರ್ಗದಲ್ಲಿ ‘ಒಂದು ದೇಶ–ಒಂದು ಕಾರ್ಡ್’ ಯೋಜನೆಯ ಅನುಷ್ಠಾನಕ್ಕೆ ಪೂರಕವಾಗಿ ಸ್ವಯಂಚಾಲಿತ ಶುಲ್ಕ ಸಂಗ್ರಹ ವ್ಯವಸ್ಥೆ ಮಾಡಲಾಗಿದೆ. ಈ ಮಾರ್ಗವು ‘ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್’ ಹಾಗೂ ಕ್ಯೂ ಆರ್ ಕೋಡ್ಗೆ ಹೊಂದಿಕೆಯಾಗುವ ಎಎಫ್ಸಿ ವ್ಯವಸ್ಥೆ ಹೊಂದಿರಲಿದೆ. ಪ್ರತಿಯೊಂದು ನಿಲ್ದಾಣದ ಮೇಲ್ಛಾವಣಿಯಲ್ಲಿ250 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಅಳವಡಿಸಲು ವಿನ್ಯಾಸಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಈ ಮಾರ್ಗದಲ್ಲಿ ರೈಲಿನ ಪರೀಕ್ಷಾರ್ಥ ಓಡಾಟ ಪೂರ್ಣಗೊಂಡಿದೆ. ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ನಿಲ್ದಾಣಗಳಲ್ಲಿ ವಾಹನ ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ. ಕೆಂಗೇರಿ ಬಸ್ ನಿಲ್ದಾಣದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ನಿಲ್ದಾಣ ಬಿಟ್ಟು ಉಳಿದೆಡೆ ಪ್ರಯಾಣಿಕರು ರಸ್ತೆ ದಾಟಲು ಪಾದಚಾರಿ ಮಾರ್ಗ ಬಳಸಬಹುದು. ವಿಸ್ತರಿತ ಮಾರ್ಗದಿಂದಾಗಿ ಪ್ರತಿದಿನ ಸರಾಸರಿ75 ಸಾವಿರ ಮಂದಿಗೆ ಅನುಕೂಲವಾಗಲಿದೆ. ನಗರದ ಸಂಚಾರ ವ್ಯವಸ್ಥೆಯೂ ಸುಗಮಗೊಳ್ಳಲಿದೆ’ ಎಂದು ತಿಳಿಸಿದರು.</p>.<p>‘ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಿತ ಮಾರ್ಗದ ಕಾಮಗಾರಿಯೂ ಪ್ರಗತಿಯಲ್ಲಿದೆ. ಇದು2022ರ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಯೋಜನೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ನಮ್ಮ ಸರ್ಕಾರ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ. ಕೇಂದ್ರ ಸರ್ಕಾರವು2ಎ,2ಬಿ ಹಂತಗಳ ಮಾರ್ಗಗಳಿಗೆ ಹಸಿರು ನಿಶಾನೆ ತೋರಿದೆ. ಇದರಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೂ ಮೆಟ್ರೊ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>