‘ಈ ಯೋಜನೆಗೆ₹1,560 ಕೋಟಿ ವೆಚ್ಚ ಮಾಡಲಾಗಿದೆ. ಭೂ ಸ್ವಾಧೀನಕ್ಕೆ ₹360 ಕೋಟಿ ವ್ಯಯಿಸಲಾಗಿದೆ. ಈ ಮಾರ್ಗದಿಂದಾಗಿ ಪೂರ್ವ–ಪಶ್ಚಿಮ ಕಾರಿಡಾರ್ ಮಾರ್ಗದ ಉದ್ದವು18.1 ಕಿ.ಮೀ.ಗೆ ಹೆಚ್ಚಿದೆ. ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ನಿಲ್ದಾಣ ಹಾಗೂ ಕೆಂಗೇರಿಯಲ್ಲಿ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ’ ಎಂದರು.