‘ಆಧ್ಯಾತ್ಮಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ವಿಶ್ವೇಶತೀರ್ಥರು, ತಮ್ಮ ಪರಿಶುದ್ಧ ಚಾರಿತ್ರ್ಯ, ಅಪಾರ ವಿದ್ವತ್ತಿನಿಂದ ಕೋಟ್ಯಾಂತರ ಭಕ್ತರಿಗೆ ಮಾರ್ಗದರ್ಶನ ಮಾಡಿದ್ದರು. 5 ಬಾರಿ ಉಡುಪಿಯ ಕೃಷ್ಣನ ಪರ್ಯಾಯ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿ, ದಾಖಲೆ ನಿರ್ಮಿಸಿದ್ದರು. ದೇಶದಾದ್ಯಂತ 80 ಕ್ಕೂ ಹೆಚ್ಚು ಶಾಲಾ–ಕಾಲೇಜುಗಳು, ಅನಾಥಾಶ್ರಮ, ವೇದಪಾಠಶಾಲೆಗಳನ್ನು ನಿರ್ಮಿಸುವ ಮೂಲಕ ಸಮಾಜಸೇವೆಯಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇಡೀ ದೇಶದ ಉದ್ದಗಲದಲ್ಲಿ ಅಮಿತವಾದ ಸಂಚಾರ, ಸಕ್ರಿಯ ಚಟುವಟಿಕೆಗಳಿಂದಾಗಿ ಅಪಾರ ಜನಮನ್ನಣೆ ಹೊಂದಿದ್ದರು’ ಎಂದು ಸ್ಮರಿಸಿಕೊಂಡರು.