ಚಿಕ್ಕಮಗಳೂರು: ‘ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರೇ ಮುಂದುವರಿಯಲಿ’ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.
‘ದಕ್ಷಿಣ ಭಾರತದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರದ ಪಡೆಯುವಲ್ಲಿ ಯಡಿಯೂರಪ್ಪ ಅವರ ಶ್ರಮ ಇದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ, ಪಕ್ಷಕ್ಕೆ ದುಸ್ಥಿತಿ ಬರಲಿದೆ. ಈ ಬಗ್ಗೆ ಹೈಕಮಾಂಡ್ ಸಮೀಕ್ಷೆ ನಡೆಸಲಿ’ ಎಂದರು.
‘ಮುಂದಿನ ವಿಧಾನಸಭೆ ಚುನಾವಣೆವರೆಗೆ ಅವರನ್ನೇ ಮುಂದುವರಿಸಿದರೆ, ಪಕ್ಷ ಗಟ್ಟಿಯಾಗಲಿದೆ. ಮುಖ್ಯಮಂತ್ರಿಯಾಗಲು ಎಲ್ಲರಿಗೂ ಆಸೆ ಇರುತ್ತದೆ. ಆದರೆ, ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವುದು ಕಠಿಣ ಕೆಲಸ’ ಎಂದರು.