ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿವಿಧ ಜಿಲ್ಲಾ ಬಿಜೆಪಿ ಕಚೇರಿಗಳ ಉದ್ಘಾಟನೆಯನ್ನು ವರ್ಚುವಲ್ ಆಗಿ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮೊದಲು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿರಲಿಲ್ಲ. ಅಲ್ಲದೇ, ಜನಸಂಕಲ್ಪ ಯಾತ್ರೆಗೆ ಕರೆಯದೇ ನಿರ್ಲಕ್ಷಿಸುತ್ತಿದೆ ಎಂದು ಯಡಿಯೂರಪ್ಪ ಅವರು ಮುನಿಸಿಕೊಂಡಿದ್ದರು.