ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಮಾತನಾಡಿ, ‘ರಾಜ್ಯ ವಿಧಾನಮಂಡಲದಲ್ಲಿ ಕಾಗದರಹಿತ ವ್ಯವಸ್ಥೆ ಜಾರಿಗೊಳಿಸುವ ಹೆಸರಿನಲ್ಲಿ ₹ 250 ಕೋಟಿ ಮೊತ್ತದ ಹಗರಣ ನಡೆಯುತ್ತಿದೆ. ಹಣ ಲೂಟಿ ಮಾಡುವುದಕ್ಕಾಗಿಯೇ ಕೇಂದ್ರ ಸರ್ಕಾರದ ಇ–ವಿಧಾನ್ ಯೋಜನೆಯನ್ನು ಬಿಟ್ಟು ನೇರವಾಗಿ ಡಿಜಿಟಲೀಕರಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ’ ಎಂದರು.