ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ‘ರಾಷ್ಟ್ರಪತಿ, ಪ್ರಧಾನಿ ಮೋದಿ, ದೇವೇಗೌಡರು ಕರೆ ಮಾಡಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು. ಅಲ್ಲದೆ, ಇತರ ಹಲವು ಗಣ್ಯರೂ ಶುಭ ಹಾರೈಸಿದ್ದಾರೆ. ಎಲ್ಲರ ಅಪೇಕ್ಷೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿ, ನಾಡನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ. ಇದೇ 8ರಂದು ಉತ್ತಮ ಬಜೆಟ್ ಮಂಡಿಸುತ್ತೇನೆ’ ಎಂದು ಭರವಸೆ ನೀಡಿದರು. ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರು ಯಡಿಯೂರಪ್ಪ ಅವರನ್ನು ಖುದ್ದು ಭೇಟಿಯಾಗಿ ಶುಭ ಕೋರಿದರು.