ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಇಂದು ದೆಹಲಿಗೆ

Last Updated 16 ಸೆಪ್ಟೆಂಬರ್ 2020, 18:59 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಬೆಳಿಗ್ಗೆ ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಇದೇ 18 ರಂದು ಕರ್ನಾಟಕ ಭವನ ನಂ–1 ರ (ಕಾವೇರಿ) ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 19 ರಂದು ನಗರಕ್ಕೆ ವಾಪಸಾಗಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್ ಅವರ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳು, ಜಿಎಸ್‌ಟಿ ಪರಿಹಾರ ನೀಡುವಂತೆ ಹಣಕಾಸು ಸಚಿವರನ್ನು ಒತ್ತಾಯಿಸುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೂ ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT