<p><strong>ಬೆಂಗಳೂರು</strong>: ‘ಮುಂದಿನ ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆದ್ದರಿಂದ ಖಾಲಿ ಇಲ್ಲದ ಕುರ್ಚಿಗೆ ಟವೆಲ್ ಹಾಕಿ ವ್ಯರ್ಥ ಮಾಡುವುದು ಸರಿಯಲ್ಲ’ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಬಸನಗೌಡ ಯತ್ನಾಳ ಅವರಿಗೆ ತಿರುಗೇಟು ನೀಡಿದ್ದಾರೆ.</p>.<p>ಯಡಿಯೂರಪ್ಪ ಹೆಚ್ಚು ದಿನ ಮುಖ್ಯಮಂತ್ರಿ ಆಗಿ ಮುಂದುವರಿಯುವುದಿಲ್ಲ ಎಂಬ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅಶೋಕ, ವಿಧಾನಸಭೆ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲೇ ಗೆದ್ದಿದ್ದೇವೆ. ಅವರ ನೇತೃತ್ವದಲ್ಲೇ ಮುಂದಿನ ಮೂರು ವರ್ಷ ಸರ್ಕಾರ ನಡೆಯುತ್ತದೆ ಎಂದು ಹೇಳಿದರು.</p>.<p>ಯತ್ನಾಳ ಅವರು ಖಾಲಿ ಇಲ್ಲದ ಸೀಟಿಗೆ ಟವೆಲ್ ಹಾಕುವುದನ್ನು ಬಿಡಲಿ. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದು ಅವರು ಹೇಳಿದರು.</p>.<p class="Subhead"><strong>ಸೂಕ್ತ ವೇದಿಕೆಯಲ್ಲಿ ಚರ್ಚೆ: </strong>ಯತ್ನಾಳ ಅವರು ಹಲವು ಕಾರಣಗಳಿಗೆ ಆಗಾಗ್ಗೆ ಹೇಳಿಕೆ ನೀಡುತ್ತಿರುತ್ತಾರೆ. ಆ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಪಕ್ಷದ ಆಂತರಿಕ ವಿಷಯಗಳನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಲಾಗುವುದು ಎಂದೂ ಅವರು ತಿಳಿಸಿದರು.</p>.<p class="Subhead"><strong>ಅನವಶ್ಯಕ ಗೊಂದಲ:</strong> ಬಸನಗೌಡ ಪಾಟೀಲ ಅವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ. ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.</p>.<p class="Subhead"><strong>ನೀವು ಸಿಎಂ ಆಗಲು ಸಾಧ್ಯವಿಲ್ಲ: </strong>ರಾಜ್ಯ ರಾಜಕಾರಣದಲ್ಲಿ ಬಿ.ಎಸ್.ಯಡಿಯೂರಪ್ಪ ಆಲದ ಮರ ಇದ್ದಂತೆ. ಆ ಮರದ ಕೆಳಗೆ ನಾವು ರಾಜಕಾರಣ ಮಾಡಬೇಕು. ಅವರನ್ನು ಟೀಕೆ ಮಾಡಿ ನೀವು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಯತ್ನಾಳಗೆ ತಿರುಗೇಟು ನೀಡಿದ್ದಾರೆ.</p>.<p>ಯತ್ನಾಳ ಅವರು ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಬದಲಿಸಬೇಕು ಉತ್ತರ ಕರ್ನಾಟಕದವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ರೀತಿಯ ಚರ್ಚೆಗಳು ನಡೆದಿಲ್ಲ. ಯತ್ನಾಳ ಅವರು ಸ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂದು ಅವರು ಹರಿಹಾಯ್ದರು.</p>.<p><strong>ಬಿಎಸ್ವೈ ಇಳಿಸಿದರೆ ಬಿಜೆಪಿಯೇ ಇರಲ್ಲ</strong></p>.<p>‘ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ವಿಚಾರ ಗುಟ್ಟಾಗಿ ಉಳಿದಿಲ್ಲ. ಐದಾರು ತಿಂಗಳುಗಳಿಂದ ಈ ಪ್ರಯತ್ನ ನಡೆಯುತ್ತಿದೆ. ಆದರೆ, ಅವರನ್ನು ಕೆಳಗಿಳಿಸಿದರೆ ಈ ಸರ್ಕಾರವೂ ಇರಲ್ಲ, ಬಿಜೆಪಿಯೂ ಇರಲ್ಲ. ಅದರ ಲಾಭ ಕಾಂಗ್ರೆಸ್ಗೆ ಸಿಗಲಿದೆ’ ಎಂದು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯ ಒಳಜಗಳ, ಕಿತ್ತಾಟಗಳೇ ಆ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಮುಳುವಾಗಲಿದೆ’ ಎಂದರು. ‘ಗುಂಪುಗಾರಿಕೆ, ಬಣ ರಾಜಕಾರಣ ಬಿಜೆಪಿಯಲ್ಲಿ ಹೆಚ್ಚಾಗಿದೆ. ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಲ್ಲೇ ಹೆಚ್ಚು ಬಣ ರಾಜಕೀಯ ಇರುವುದು. ನಮ್ಮ ಪಕ್ಷದಲ್ಲೂ ಸಣ್ಣಪುಟ್ಟ ಅಸಮಾಧಾನಗಳಿವೆ. ಆದರೆ, ಬಿಜೆಪಿಯಷ್ಟು ಇಲ್ಲ’ ಎಂದರು.</p>.<p>‘ಪ್ರಧಾನಿ ಮೋದಿ ತಿರುಪತಿ ತಿಮ್ಮಪ್ಪ ಇದ್ದಂತೆ. ತಿಮ್ಮಪ್ಪನನ್ನು ಮಾತನಾಡಿಸಲು ಆಗುತ್ತದೆಯೇ. ನಮಸ್ಕಾರ ಮಾಡಿಕೊಂಡು ಬರಬಹುದು ಅಷ್ಟೇ. ಮೋದಿ ಕೂಡ ಹಾಗೆಯೇ, ಬಿಜೆಪಿಯವರೆಲ್ಲ ಅವರಿಗೆ ನಮಸ್ಕಾರ ಮಾಡಿ ಬರುತ್ತಾರೆ ಅನುದಾನ ಕೇಳಲು ಆಗಲ್ಲ’ ಎಂದು ವ್ಯಂಗ್ಯವಾಡಿದರು.</p>.<p><strong>ಬಿಎಸ್ವೈ ಪೂರ್ಣಾವಧಿ ಸಿ.ಎಂ</strong></p>.<p>‘ಬಿ.ಎಸ್. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರಾಗಿದ್ದು, ಪೂರ್ಣಾವಧಿ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘2018ರಲ್ಲಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ, ಅವರ ನಾಯಕತ್ವದಲ್ಲೇ ಸರ್ಕಾರವನ್ನೂ ರಚಿಸಲಾಗಿದೆ. ಸರ್ಕಾರದ ಉಳಿದ ಅವಧಿಯಲ್ಲಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು, ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<p>‘ನಾಯಕತ್ವ ಬದಲಾವಣೆ ಬಗ್ಗೆ ಕೆಲವರು ನೀಡುತ್ತಿರುವ ವ್ಯತಿರಿಕ್ತ ಹೇಳಿಕೆಗಳಿಗೆ ಯಾವುದೇ ಅರ್ಥ ಇರುವುದಿಲ್ಲ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮುಂದಿನ ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆದ್ದರಿಂದ ಖಾಲಿ ಇಲ್ಲದ ಕುರ್ಚಿಗೆ ಟವೆಲ್ ಹಾಕಿ ವ್ಯರ್ಥ ಮಾಡುವುದು ಸರಿಯಲ್ಲ’ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಬಸನಗೌಡ ಯತ್ನಾಳ ಅವರಿಗೆ ತಿರುಗೇಟು ನೀಡಿದ್ದಾರೆ.</p>.<p>ಯಡಿಯೂರಪ್ಪ ಹೆಚ್ಚು ದಿನ ಮುಖ್ಯಮಂತ್ರಿ ಆಗಿ ಮುಂದುವರಿಯುವುದಿಲ್ಲ ಎಂಬ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅಶೋಕ, ವಿಧಾನಸಭೆ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲೇ ಗೆದ್ದಿದ್ದೇವೆ. ಅವರ ನೇತೃತ್ವದಲ್ಲೇ ಮುಂದಿನ ಮೂರು ವರ್ಷ ಸರ್ಕಾರ ನಡೆಯುತ್ತದೆ ಎಂದು ಹೇಳಿದರು.</p>.<p>ಯತ್ನಾಳ ಅವರು ಖಾಲಿ ಇಲ್ಲದ ಸೀಟಿಗೆ ಟವೆಲ್ ಹಾಕುವುದನ್ನು ಬಿಡಲಿ. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದು ಅವರು ಹೇಳಿದರು.</p>.<p class="Subhead"><strong>ಸೂಕ್ತ ವೇದಿಕೆಯಲ್ಲಿ ಚರ್ಚೆ: </strong>ಯತ್ನಾಳ ಅವರು ಹಲವು ಕಾರಣಗಳಿಗೆ ಆಗಾಗ್ಗೆ ಹೇಳಿಕೆ ನೀಡುತ್ತಿರುತ್ತಾರೆ. ಆ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಪಕ್ಷದ ಆಂತರಿಕ ವಿಷಯಗಳನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಲಾಗುವುದು ಎಂದೂ ಅವರು ತಿಳಿಸಿದರು.</p>.<p class="Subhead"><strong>ಅನವಶ್ಯಕ ಗೊಂದಲ:</strong> ಬಸನಗೌಡ ಪಾಟೀಲ ಅವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ. ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.</p>.<p class="Subhead"><strong>ನೀವು ಸಿಎಂ ಆಗಲು ಸಾಧ್ಯವಿಲ್ಲ: </strong>ರಾಜ್ಯ ರಾಜಕಾರಣದಲ್ಲಿ ಬಿ.ಎಸ್.ಯಡಿಯೂರಪ್ಪ ಆಲದ ಮರ ಇದ್ದಂತೆ. ಆ ಮರದ ಕೆಳಗೆ ನಾವು ರಾಜಕಾರಣ ಮಾಡಬೇಕು. ಅವರನ್ನು ಟೀಕೆ ಮಾಡಿ ನೀವು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಯತ್ನಾಳಗೆ ತಿರುಗೇಟು ನೀಡಿದ್ದಾರೆ.</p>.<p>ಯತ್ನಾಳ ಅವರು ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಬದಲಿಸಬೇಕು ಉತ್ತರ ಕರ್ನಾಟಕದವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ರೀತಿಯ ಚರ್ಚೆಗಳು ನಡೆದಿಲ್ಲ. ಯತ್ನಾಳ ಅವರು ಸ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂದು ಅವರು ಹರಿಹಾಯ್ದರು.</p>.<p><strong>ಬಿಎಸ್ವೈ ಇಳಿಸಿದರೆ ಬಿಜೆಪಿಯೇ ಇರಲ್ಲ</strong></p>.<p>‘ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ವಿಚಾರ ಗುಟ್ಟಾಗಿ ಉಳಿದಿಲ್ಲ. ಐದಾರು ತಿಂಗಳುಗಳಿಂದ ಈ ಪ್ರಯತ್ನ ನಡೆಯುತ್ತಿದೆ. ಆದರೆ, ಅವರನ್ನು ಕೆಳಗಿಳಿಸಿದರೆ ಈ ಸರ್ಕಾರವೂ ಇರಲ್ಲ, ಬಿಜೆಪಿಯೂ ಇರಲ್ಲ. ಅದರ ಲಾಭ ಕಾಂಗ್ರೆಸ್ಗೆ ಸಿಗಲಿದೆ’ ಎಂದು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯ ಒಳಜಗಳ, ಕಿತ್ತಾಟಗಳೇ ಆ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಮುಳುವಾಗಲಿದೆ’ ಎಂದರು. ‘ಗುಂಪುಗಾರಿಕೆ, ಬಣ ರಾಜಕಾರಣ ಬಿಜೆಪಿಯಲ್ಲಿ ಹೆಚ್ಚಾಗಿದೆ. ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಲ್ಲೇ ಹೆಚ್ಚು ಬಣ ರಾಜಕೀಯ ಇರುವುದು. ನಮ್ಮ ಪಕ್ಷದಲ್ಲೂ ಸಣ್ಣಪುಟ್ಟ ಅಸಮಾಧಾನಗಳಿವೆ. ಆದರೆ, ಬಿಜೆಪಿಯಷ್ಟು ಇಲ್ಲ’ ಎಂದರು.</p>.<p>‘ಪ್ರಧಾನಿ ಮೋದಿ ತಿರುಪತಿ ತಿಮ್ಮಪ್ಪ ಇದ್ದಂತೆ. ತಿಮ್ಮಪ್ಪನನ್ನು ಮಾತನಾಡಿಸಲು ಆಗುತ್ತದೆಯೇ. ನಮಸ್ಕಾರ ಮಾಡಿಕೊಂಡು ಬರಬಹುದು ಅಷ್ಟೇ. ಮೋದಿ ಕೂಡ ಹಾಗೆಯೇ, ಬಿಜೆಪಿಯವರೆಲ್ಲ ಅವರಿಗೆ ನಮಸ್ಕಾರ ಮಾಡಿ ಬರುತ್ತಾರೆ ಅನುದಾನ ಕೇಳಲು ಆಗಲ್ಲ’ ಎಂದು ವ್ಯಂಗ್ಯವಾಡಿದರು.</p>.<p><strong>ಬಿಎಸ್ವೈ ಪೂರ್ಣಾವಧಿ ಸಿ.ಎಂ</strong></p>.<p>‘ಬಿ.ಎಸ್. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರಾಗಿದ್ದು, ಪೂರ್ಣಾವಧಿ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘2018ರಲ್ಲಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ, ಅವರ ನಾಯಕತ್ವದಲ್ಲೇ ಸರ್ಕಾರವನ್ನೂ ರಚಿಸಲಾಗಿದೆ. ಸರ್ಕಾರದ ಉಳಿದ ಅವಧಿಯಲ್ಲಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು, ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<p>‘ನಾಯಕತ್ವ ಬದಲಾವಣೆ ಬಗ್ಗೆ ಕೆಲವರು ನೀಡುತ್ತಿರುವ ವ್ಯತಿರಿಕ್ತ ಹೇಳಿಕೆಗಳಿಗೆ ಯಾವುದೇ ಅರ್ಥ ಇರುವುದಿಲ್ಲ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>