ಬುಧವಾರ, ಮಾರ್ಚ್ 29, 2023
23 °C

ಬಜೆಟ್‌: ಇಲಾಖಾವಾರು ಚರ್ಚೆ ಆರಂಭಿಸಿದ ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬರುವ ಆರ್ಥಿಕ ವರ್ಷದ ಬಜೆಟ್‌ ಅಂತಿಮಗೊಳಿಸುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಇಲಾಖಾವಾರು ಚರ್ಚೆ ನಡೆಸಿದರು. ಮೊದಲ ದಿನ ಹಲವು ಇಲಾಖೆಗಳ ಸಚಿವರು ಅಧಿಕಾರಿಗಳ ಜತೆ ಅವರು ಸಮಾಲೋಚನೆ ನಡೆಸಿದರು.

ಮೊದಲ ದಿನ ಹತ್ತು ಇಲಾಖೆಗಳ ಬೇಡಿಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಮಯ ನಿಗದಿಪಡಿಸಿದ್ದರು. ಆದರೆ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರವಾಸ ಮುಗಿಸಿ ಅವರು ಹಿಂದಿರುಗುವುದು ವಿಳಂಬವಾಯಿತು. ಸುಮಾರು ಒಂದು ಗಂಟೆಯಷ್ಟು ತಡವಾಗಿ ಸಭೆ ಆರಂಭವಾಯಿತು. ಆರು ಇಲಾಖೆಗಳಿಗೆ ಸಂಬಂಧಿಸಿದ ಚರ್ಚೆ ಮಾತ್ರ ಪೂರ್ಣಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇರಿದಂತೆ ಆರು ಇಲಾಖೆಗಳ ಬೇಡಿಕೆಗಳ ಪಟ್ಟಿಯನ್ನು ಸಚಿವರು, ಅಧಿಕಾರಿಗಳು ಸಲ್ಲಿಸಿದರು. ಕೆಲವು ಇಲಾಖೆಗಳಲ್ಲಿ ಹೊಸ ಯೋಜನೆಗಳ ಅನುಷ್ಠಾನಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌ ಸಭೆಯಲ್ಲಿದ್ದರು. ಉಳಿದ ಇಲಾಖೆಗಳ ಬೇಡಿಕೆಯನ್ನು ಅಧಿಕಾರಿಗಳೇ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು