<p>ಬೆಂಗಳೂರು: ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದನ್ನು ನಿಷೇಧಿಸಲು ಕೋರಿರುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ನಾಗರಿಕರ ಆರೋಗ್ಯ ಮತ್ತು ಪರಿಸರದ ಮೇಲಾಗುವ ಪರಿಣಾಮ ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮನವಿಯನ್ನು ಮೂರು ತಿಂಗಳ ಒಳಗೆ ಪರಿಗಣಿಸಬೇಕಾಗುತ್ತದೆ’ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.</p>.<p>ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ‘ಸಮರ್ಪಣ’ ಸಂಸ್ಥೆಯು ಕಳೆದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.</p>.<p>‘ಕೋವಿಡ್ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. 2020ರ ನವೆಂಬರ್ 9ರಿಂದ 30ರವರೆಗೆ ನವದೆಹಲಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಹೊರಡಿಸಿತ್ತು’ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದಲ್ಲಿ ಪಟಾಕಿ ಮಾರಾಟ ಮಾಡುವುದು ಮತ್ತು ಸಿಡಿಸುವುದನ್ನು ನಿಷೇಧಿಸಲು ಕೋರಿರುವ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ನಾಗರಿಕರ ಆರೋಗ್ಯ ಮತ್ತು ಪರಿಸರದ ಮೇಲಾಗುವ ಪರಿಣಾಮ ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮನವಿಯನ್ನು ಮೂರು ತಿಂಗಳ ಒಳಗೆ ಪರಿಗಣಿಸಬೇಕಾಗುತ್ತದೆ’ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.</p>.<p>ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ‘ಸಮರ್ಪಣ’ ಸಂಸ್ಥೆಯು ಕಳೆದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.</p>.<p>‘ಕೋವಿಡ್ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. 2020ರ ನವೆಂಬರ್ 9ರಿಂದ 30ರವರೆಗೆ ನವದೆಹಲಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಹೊರಡಿಸಿತ್ತು’ ಎಂದೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>