ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಗಿತಗೊಂಡ ಬಸ್‌ ಸೇವೆ: ಪ್ರಯಾಣಿಕರ ಪರದಾಟ

Last Updated 11 ಡಿಸೆಂಬರ್ 2020, 5:34 IST
ಅಕ್ಷರ ಗಾತ್ರ

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬಸ್‌ ಸಂಚಾರ ಸ್ಥಗಿತಗೊಳಿಸಿ ಶುಕ್ರವಾರ ಮುಷ್ಕರ ಆರಂಭಿಸಿದ್ದಾರೆ. ಇದರಿಂದ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ.

ನಸುಕಿನಲ್ಲಿ ಎಂದಿನಂತೆ ಆರಂಭವಾದ ಬಸ್‌ ಸಂಚಾರ ಬೆಳಿಗ್ಗೆ 7 ಗಂಟೆಯ ಬಳಿಕ ಸ್ಥಗಿತಗೊಂಡಿತು. ಸೇವೆಯಿಂದ ಹೊರಗುಳಿದ ಚಾಲಕರು ಹಾಗೂ ನಿರ್ವಾಹಕರು ಬಸ್‌ ನಿಲುಗಡೆ ಮಾಡಿದರು. ಬೇರೆ ಊರಿಗೆ ತೆರಳಲು ಬಂದಿದ್ದ ಸಿಬ್ಬಂದಿ ಸಮಸ್ಯೆ ಎದುರಿಸಬೇಕಾಯಿತು.

ಶಿವಮೊಗ್ಗ, ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಕೆಲ ಬಸ್‌ಗಳು ಚಿತ್ರದುರ್ಗ ಬಸ್‌ ನಿಲ್ದಾಣದಲ್ಲಿದ್ದ ಪ್ರಯಾಣಿಕರಿಗೆ ಸೇವೆ ಒದಗಿಸಲಿಲ್ಲ. ಮಾರ್ಗ ಮಧ್ಯೆ ಬಸ್‌ ನಿಲುಗಡೆ ಮಾಡುವ ಅನಿವಾರ್ಯತೆ ಸೃಷ್ಟಿಯಾದರೆ ತೊಂದರೆಯಾಗುತ್ತದೆ ಎಂಬ ಕಾರಣ ನೀಡಿ ಪ್ರಯಾಣ ಮುಂದುವರಿಸಿದವು. ಚಿತ್ರದುರ್ಗ ಡಿಪೊದ ಬಸ್‌ಗಳು ಮಾತ್ರ ಸಂಚಾರಿಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT