<p><strong>ಬೆಂಗಳೂರು: </strong>ರಿಯಲ್ ಎಸ್ಟೇಟ್ ಉದ್ಯಮಿ ಕೆ.ರಘುನಾಥ್ ನಿಗೂಢ ಸಾವಿನ ಪ್ರಕರಣ ಕುರಿತಂತೆ ಖ್ಯಾತ ಉದ್ಯಮಿ, ಮಾಜಿ ಸಂಸದ, ಟಿಟಿಡಿ ಅಧ್ಯಕ್ಷರೂ ಆಗಿದ್ದ ದಿ. ಡಿ.ಕೆ.ಆದಿಕೇವಶವುಲು ಅವರ ಪುತ್ರ<br />ಡಿ.ಎ.ಶ್ರೀನಿವಾಸ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿಸಿದೆ.</p>.<p>ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಕೆ.ರಘುನಾಥ್ ಅವರ ಪತ್ನಿ ಎಂ.ಮಂಜುಳಾ, ಪುತ್ರ ರೋಹಿತ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಪುರಸ್ಕರಿಸಿದ್ದು, ಸಿಬಿಐ ತನಿಖೆಗೆ ಆದೇಶಿಸಿದೆ.</p>.<p>‘ಪೊಲೀಸ್, ಎಸ್ಐಟಿ ತನಿಖೆಯಲ್ಲಿ ಲೋಪಗಳಿವೆ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ‘ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಅಗತ್ಯವಿದೆ. ಹಾಗಾಗಿ, ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ನೀಡಬೇಕು’ ಎಂದು ಸಿಬಿಐಗೆ ಆದೇಶಿಸಿದೆ.</p>.<p class="Subhead"><strong>ಪ್ರಕರಣವೇನು?: </strong>ಕೆ.ರಘುನಾಥ್2019ರ ಮೇನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ‘ಇದು ಆತ್ಮಹತ್ಯೆಯಲ್ಲ, ಕೊಲೆ’ ಎಂಬ ಆರೋಪದಡಿ ಶ್ರೀನಿವಾಸ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.</p>.<p>‘ಆಸ್ತಿ ವಿಚಾರ ಮಾತನಾಡಲು ನನ್ನ ಪತಿ ರಘುನಾಥ್ ಅವರನ್ನು ಕರೆಸಿ ಕೊಂಡಿದ್ದ ಆರೋಪಿಗಳು ಕೊಲೆ ಮಾಡಿದ್ದಾರೆ’ ಎಂದು ಪತ್ನಿ ಮಂಜುಳಾ ದೂರು ನೀಡಿದ್ದರು. ‘ರಘುನಾಥ್ ತೀರಿ ಕೊಂಡ 7 ತಿಂಗಳ ನಂತರ ಆರೋಪಿ ಗಳೇ ಫೋರ್ಜರಿ ವಿಲ್ ಮಾಡಿಸಿ ಬಹುಕೋಟಿ ಮೌಲ್ಯದ ಸ್ಥಿರಾಸ್ತಿ ಕಬಳಿ ಸಲು ಮುಂದಾಗಿದ್ದಾರೆ’ ಎಂದು ವಿವರಿಸಿ ದ್ದರು. ದೂರಿನನ್ವಯ ಪೊಲೀಸ್, ಎಸ್ಐಟಿ ತನಿಖೆ ನಡೆಸಲಾಗಿತ್ತು.</p>.<p>ತನಿಖೆಯನ್ನು ಪೂರ್ಣಗೊಳಿಸಿದ್ದ ಎಸ್ಐಟಿ, ‘ಆರೋಪದಲ್ಲಿ ಹುರುಳಿಲ್ಲ, ಪ್ರಕರಣ ಮುಕ್ತಾಯಗೊಳಿಸಬಹುದು’ ಎಂದು ನ್ಯಾಯಾಲಯಕ್ಕೆ ಅಂತಿಮ ‘ಬಿ’ ವರದಿ ಸಲ್ಲಿಸಿತ್ತು. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಿಯಲ್ ಎಸ್ಟೇಟ್ ಉದ್ಯಮಿ ಕೆ.ರಘುನಾಥ್ ನಿಗೂಢ ಸಾವಿನ ಪ್ರಕರಣ ಕುರಿತಂತೆ ಖ್ಯಾತ ಉದ್ಯಮಿ, ಮಾಜಿ ಸಂಸದ, ಟಿಟಿಡಿ ಅಧ್ಯಕ್ಷರೂ ಆಗಿದ್ದ ದಿ. ಡಿ.ಕೆ.ಆದಿಕೇವಶವುಲು ಅವರ ಪುತ್ರ<br />ಡಿ.ಎ.ಶ್ರೀನಿವಾಸ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿಸಿದೆ.</p>.<p>ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಕೆ.ರಘುನಾಥ್ ಅವರ ಪತ್ನಿ ಎಂ.ಮಂಜುಳಾ, ಪುತ್ರ ರೋಹಿತ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಪುರಸ್ಕರಿಸಿದ್ದು, ಸಿಬಿಐ ತನಿಖೆಗೆ ಆದೇಶಿಸಿದೆ.</p>.<p>‘ಪೊಲೀಸ್, ಎಸ್ಐಟಿ ತನಿಖೆಯಲ್ಲಿ ಲೋಪಗಳಿವೆ’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ‘ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಅಗತ್ಯವಿದೆ. ಹಾಗಾಗಿ, ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ನೀಡಬೇಕು’ ಎಂದು ಸಿಬಿಐಗೆ ಆದೇಶಿಸಿದೆ.</p>.<p class="Subhead"><strong>ಪ್ರಕರಣವೇನು?: </strong>ಕೆ.ರಘುನಾಥ್2019ರ ಮೇನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ‘ಇದು ಆತ್ಮಹತ್ಯೆಯಲ್ಲ, ಕೊಲೆ’ ಎಂಬ ಆರೋಪದಡಿ ಶ್ರೀನಿವಾಸ್ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.</p>.<p>‘ಆಸ್ತಿ ವಿಚಾರ ಮಾತನಾಡಲು ನನ್ನ ಪತಿ ರಘುನಾಥ್ ಅವರನ್ನು ಕರೆಸಿ ಕೊಂಡಿದ್ದ ಆರೋಪಿಗಳು ಕೊಲೆ ಮಾಡಿದ್ದಾರೆ’ ಎಂದು ಪತ್ನಿ ಮಂಜುಳಾ ದೂರು ನೀಡಿದ್ದರು. ‘ರಘುನಾಥ್ ತೀರಿ ಕೊಂಡ 7 ತಿಂಗಳ ನಂತರ ಆರೋಪಿ ಗಳೇ ಫೋರ್ಜರಿ ವಿಲ್ ಮಾಡಿಸಿ ಬಹುಕೋಟಿ ಮೌಲ್ಯದ ಸ್ಥಿರಾಸ್ತಿ ಕಬಳಿ ಸಲು ಮುಂದಾಗಿದ್ದಾರೆ’ ಎಂದು ವಿವರಿಸಿ ದ್ದರು. ದೂರಿನನ್ವಯ ಪೊಲೀಸ್, ಎಸ್ಐಟಿ ತನಿಖೆ ನಡೆಸಲಾಗಿತ್ತು.</p>.<p>ತನಿಖೆಯನ್ನು ಪೂರ್ಣಗೊಳಿಸಿದ್ದ ಎಸ್ಐಟಿ, ‘ಆರೋಪದಲ್ಲಿ ಹುರುಳಿಲ್ಲ, ಪ್ರಕರಣ ಮುಕ್ತಾಯಗೊಳಿಸಬಹುದು’ ಎಂದು ನ್ಯಾಯಾಲಯಕ್ಕೆ ಅಂತಿಮ ‘ಬಿ’ ವರದಿ ಸಲ್ಲಿಸಿತ್ತು. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>