ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ದಿನಗಳಲ್ಲಿ ಉಪ ಚುನಾವಣೆ ಘೋಷಣೆ, ನಾಲ್ಕರಲ್ಲೂ ಗೆಲುವು ನಮ್ಮದೇ: ಬಿಎಸ್‌ವೈ

Last Updated 1 ಮಾರ್ಚ್ 2021, 14:15 IST
ಅಕ್ಷರ ಗಾತ್ರ

ಶಿವಮೊಗ್ಗ: ನಾಲ್ಕು ದಿನಗಳಲ್ಲಿ ಉಪ ಚುನಾವಣೆ ಘೋಷಣೆಯಾಗಲಿದೆ. ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆಗೆ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಘೋಷಣೆಯಾದ ತಕ್ಷಣ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮಾರ್ಚ್ 8ರಂದು ಬಜೆಟ್ ಮಂಡಿಸಿದ ನಂತರ ಚುನಾವಣಾ ಪ್ರಚಾರ ಆರಂಭಿಸುವೆ ಎಂದರು.

ಹಲವು ದೇವಸ್ಥಾನಗಳಿಗೆ ಭೇಟಿ

ಯಡಿಯೂರಪ್ಪ ಅವರು ಸೋಮವಾರ ನಗರ ಡಿವಿಜನ್ ವೀರಶೈವ ಹಾಸ್ಟೆಲ್‌ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಹಲವು ದೇವಾಲಯಗಳಿಗೆ ಭೇಟಿ ನೀಡಿದರು. ಕೋಟೆ ಸೀತಾರಾಮಾಂಜನೇಯ. ಕೋಟೆ ಮಾರಿಕಾಂಬಾ, ಗೌಡ ಸಾರಸ್ವತ ಸಮಾಜದ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಮೀನಾಕ್ಷಿ ಭವನಕ್ಕೆ ತೆರಳಿ ದೋಸೆ, ಅವಲಕ್ಕಿ ಮೊಸರು ಸವಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT