ಕೋವಿಡ್ ನಿಯಂತ್ರಣದಲ್ಲಿ ಮಾಧ್ಯಮಗಳ ಪಾತ್ರವೂ ದೊಡ್ಡದು. ರೋಗದಿಂದ ಗುಣಮುಖರಾಗುವವರ ಬಗ್ಗೆಯೂ ಆದ್ಯತೆ ನೀಡಬೇಕು. ಅವರ ಅನುಭವಗಳನ್ನು ಸಾರ್ವಜನಿಕರ ಜತೆಗೆ ಹಂಚಿಕೊಂಡರೆ, ಜನರಲ್ಲಿ ವಿಶ್ವಾಸ ಮೂಡಿಸಲು ಸಾಧ್ಯವಾಗುತ್ತದೆ. ಜನರನ್ನು ಜಾಗೃತಗೊಳಿಸಲು ತಜ್ಞರ ಸಲಹೆ, ಮಾರ್ಗದರ್ಶನಗಳನ್ನು ನಿರಂತರ ತಲುಪುವಂತೆ ಮಾಡಲು ಹೆಚ್ಚಿನ ಸಮಯ ಮೀಸಲಿಟ್ಟರೆ ಜನರಲ್ಲಿ ಭರವಸೆ ಮೂಡುತ್ತದೆ ಎಂದು ಹೇಳಿದ್ದಾರೆ.