ಹಾವೇರಿ/ವಿಜಯಪುರ: ಭಾರೀ ಜಿದ್ದಾಜಿದ್ದಿಯಲ್ಲಿ ನಡೆದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದೊಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ತೀವ್ರ ಹಿನ್ನಡೆ ಅನುಭವಯಿಸಿದ್ದಾರೆ.
19 ಸುತ್ತುಗಳ ಬಳಿಕ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 28,163 ಮತಗಳ ಮುನ್ನಡೆ ಸಾಧಿಸಿದ್ದರು. ಹಾಗಾಗಿ, ಇಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತ ಎನ್ನಬಹುದಾಗಿದೆ.
ಅಭ್ಯರ್ಥಿಗಳು ಪಡೆದ ಮತಗಳ ವಿವರ (19 ಸುತ್ತು ಸೇರಿ)
*ಅಶೋಕ ಮನಗೂಳಿ (ಕಾಂಗ್ರೆಸ್): 56,487
*ರಮೇಶ ಭೂಸನೂರ (ಬಿಜೆಪಿ):84,650
*ನಾಜಿಯಾ ಅಂಗಡಿ (ಜೆಡಿಎಸ್): 3729
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆ ಹಾವೇರಿಯ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. 10ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಬಿಜೆಪಿಯ ಶಿವರಾಜ ಸಜ್ಜನರ ಅವರಿಗಿಂತ 6,459 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.
ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (11 ಸುತ್ತು ಸೇರಿ)