<p><strong>ಬೆಳಗಾವಿ:</strong> ‘ಎಲ್ಲರೂ ಬಾಯಿ ಮುಚ್ಚಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ್ದರಿಂದ ಆ ಹಕ್ಕು ಅವರಿಗೆ ಇದೆ. ವೈಯಕ್ತಿಕವಾಗಿ ನನಗೇ ಬಾಯಿ ಮುಚ್ಚು ಎಂದು ಹೇಳಿಲ್ಲ. ಒಂದು ವೇಳೆ ಹೇಳಿದ್ದರೂ ಅವರು ದೊಡ್ಡವರು. ಅವರದೇ ದೊಡ್ಡದಾಗಲಿ ಬಿಡಿ’ ಎಂದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದರು.</p>.<p>‘ಎಲ್ಲಕ್ಕಿಂತ ಮೊದಲು ಪಕ್ಷ. ಪಕ್ಷ ಕಟ್ಟಲು ಗಮನ ಕೊಡಿ ಎಂಬ ಕಾರಣಕ್ಕೆ ಶಿವಕುಮಾರ್ ಅವರು ಆ ರೀತಿ ಹೇಳಿರಬಹುದು. ನನ್ನ ಹೆಸರನ್ನು ಅವರು ಬಳಸಿಲ್ಲ’ ಎಂದು ಅವರು ನಗರದಲ್ಲಿ ಶನಿವಾರ ಮಾಧ್ಯಮಗಳ ಮುಂದೆ ಹೇಳಿದರು.</p>.<p>‘ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿ ಎಂಬುದು ರಾಜ್ಯದ ಅಲ್ಪಸಂಖ್ಯಾತರ ಅಭಿಪ್ರಾಯ ಆಗಿದೆ. ಅದನ್ನೇ ನಾನು ಹೇಳಿದ್ದೇನೆ. ಕೊನೆಗೆ ನಮ್ಮ ಪಕ್ಷದ ಹೈಕಮಾಂಡ್ ಇದನ್ನು ನಿರ್ಧಾರ ಮಾಡುತ್ತದೆ. ನಾವು ಯಾರೂ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.</p>.<p><a href="https://www.prajavani.net/karnataka-news/karnataka-assembly-election-2023-dk-shivakumar-siddaramaiah-congress-bjp-jds-politics-956837.html" itemprop="url">ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಪರೋಕ್ಷವಾಗಿ ಜಮೀರ್ ವಿರುದ್ಧ ಡಿಕೆಶಿ ಗುಡುಗು </a></p>.<p>‘ಸಿದ್ದರಾಮೋತ್ಸವ’ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ರಾಜ್ಯದ ಎಲ್ಲೆಡೆ ಪ್ರವಾಸ ಕೈಗೊಂಡಿದ್ದೇನೆ. ಈ ವೇಳೆ ಸಿದ್ದರಾಮಯ್ಯ ಅವರ ಬಗ್ಗೆಯೇ ಅಲ್ಪಸಂಖ್ಯಾತರು ಒಲವು ಹೊಂದಿದ್ದು ಕಂಡುಬಂದಿದೆ. ಅದನ್ನೇ ನಾನೂ ಹೇಳಿದ್ದೇನೆ’ ಎಂದರು.</p>.<p>‘ತಮ್ಮ ಸಮುದಾಯದ ವ್ಯಕ್ತಿಯೇ ಮುಖ್ಯಮಂತ್ರಿ ಆಗಬೇಕು ಎಂದು ಎಲ್ಲರಿಗೂ ಆಸಕ್ತಿ ಇರುತ್ತದೆ. ಅದೇ ರೀತಿ ಮುಸ್ಲಿಮರಿಗೂ ಇದೆ. ಆದರೆ, ಒಕ್ಕಲಿಗ ಸಮುದಾಯದವರೇ ಮುಖ್ಯಮಂತ್ರಿ ಆಗಬೇಕು ಎಂಬ ಬಯಕೆ ಮೊದಲು ಹೊರಹಾಕಿದ್ದೇ ಡಿ.ಕೆ. ಶಿವಕುಮಾರ್ ಅವರು’ ಎಂದೂ ಜಮೀರ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಎಲ್ಲರೂ ಬಾಯಿ ಮುಚ್ಚಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ್ದರಿಂದ ಆ ಹಕ್ಕು ಅವರಿಗೆ ಇದೆ. ವೈಯಕ್ತಿಕವಾಗಿ ನನಗೇ ಬಾಯಿ ಮುಚ್ಚು ಎಂದು ಹೇಳಿಲ್ಲ. ಒಂದು ವೇಳೆ ಹೇಳಿದ್ದರೂ ಅವರು ದೊಡ್ಡವರು. ಅವರದೇ ದೊಡ್ಡದಾಗಲಿ ಬಿಡಿ’ ಎಂದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದರು.</p>.<p>‘ಎಲ್ಲಕ್ಕಿಂತ ಮೊದಲು ಪಕ್ಷ. ಪಕ್ಷ ಕಟ್ಟಲು ಗಮನ ಕೊಡಿ ಎಂಬ ಕಾರಣಕ್ಕೆ ಶಿವಕುಮಾರ್ ಅವರು ಆ ರೀತಿ ಹೇಳಿರಬಹುದು. ನನ್ನ ಹೆಸರನ್ನು ಅವರು ಬಳಸಿಲ್ಲ’ ಎಂದು ಅವರು ನಗರದಲ್ಲಿ ಶನಿವಾರ ಮಾಧ್ಯಮಗಳ ಮುಂದೆ ಹೇಳಿದರು.</p>.<p>‘ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿ ಎಂಬುದು ರಾಜ್ಯದ ಅಲ್ಪಸಂಖ್ಯಾತರ ಅಭಿಪ್ರಾಯ ಆಗಿದೆ. ಅದನ್ನೇ ನಾನು ಹೇಳಿದ್ದೇನೆ. ಕೊನೆಗೆ ನಮ್ಮ ಪಕ್ಷದ ಹೈಕಮಾಂಡ್ ಇದನ್ನು ನಿರ್ಧಾರ ಮಾಡುತ್ತದೆ. ನಾವು ಯಾರೂ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.</p>.<p><a href="https://www.prajavani.net/karnataka-news/karnataka-assembly-election-2023-dk-shivakumar-siddaramaiah-congress-bjp-jds-politics-956837.html" itemprop="url">ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಪರೋಕ್ಷವಾಗಿ ಜಮೀರ್ ವಿರುದ್ಧ ಡಿಕೆಶಿ ಗುಡುಗು </a></p>.<p>‘ಸಿದ್ದರಾಮೋತ್ಸವ’ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ರಾಜ್ಯದ ಎಲ್ಲೆಡೆ ಪ್ರವಾಸ ಕೈಗೊಂಡಿದ್ದೇನೆ. ಈ ವೇಳೆ ಸಿದ್ದರಾಮಯ್ಯ ಅವರ ಬಗ್ಗೆಯೇ ಅಲ್ಪಸಂಖ್ಯಾತರು ಒಲವು ಹೊಂದಿದ್ದು ಕಂಡುಬಂದಿದೆ. ಅದನ್ನೇ ನಾನೂ ಹೇಳಿದ್ದೇನೆ’ ಎಂದರು.</p>.<p>‘ತಮ್ಮ ಸಮುದಾಯದ ವ್ಯಕ್ತಿಯೇ ಮುಖ್ಯಮಂತ್ರಿ ಆಗಬೇಕು ಎಂದು ಎಲ್ಲರಿಗೂ ಆಸಕ್ತಿ ಇರುತ್ತದೆ. ಅದೇ ರೀತಿ ಮುಸ್ಲಿಮರಿಗೂ ಇದೆ. ಆದರೆ, ಒಕ್ಕಲಿಗ ಸಮುದಾಯದವರೇ ಮುಖ್ಯಮಂತ್ರಿ ಆಗಬೇಕು ಎಂಬ ಬಯಕೆ ಮೊದಲು ಹೊರಹಾಕಿದ್ದೇ ಡಿ.ಕೆ. ಶಿವಕುಮಾರ್ ಅವರು’ ಎಂದೂ ಜಮೀರ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>