<p><strong>ಬೈಲಹೊಂಗಲ (ಬೆಳಗಾವಿ ಜಿಲ್ಲೆ):</strong> ‘ಜಮೀರ್ ಅಹಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವ ಧರ್ಮೀಯರನ್ನೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಅವರು ಮುಖ್ಯಮಂತ್ರಿ ಆಗುತ್ತಾರೆ’ ಎಂದು ತಾಲ್ಲೂಕಿನ ಯಕ್ಕುಂಡಿ ವಿರಕ್ತಮಠದ ಪಂಚಾಕ್ಷರಿ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಯಕ್ಕುಂಡಿ ಗ್ರಾಮದ ದಿಲಾವರ್ ದರ್ಗಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ– ಮುಸ್ಲಿಂ ಭಾವೈಕ್ಯದ ಸಂಕೇತವಾಗಿದೆ. ಈ ದರ್ಗಾಗೆ ಜಮೀರ್ ಅವರು ಬೆಂಗಳೂರಿನಿಂದ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು. ಈಗಾಗಲೇ ಸಚಿರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಇಂಥ ಒಳ್ಳೆಯ ಮನಸ್ಸು ಇರುವವರು ಮುಂದೆ ಮುಖ್ಯಮಂತ್ರಿ ಆಗಿ ಇನ್ನಷ್ಟು ಕೆಲಸ ಮಾಡಬೇಕು’ ಎಂದೂ ಹೇಳಿದರು.</p>.<p>‘ಇದರ ಜೊತೆಗೆ ಬೈಲಹೊಂಗಲ ಭಾಗದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಮುಂದೆಯೂ ಅವರು ಆರಿಸಿ ಬರಬೇಕು. ಮಂತ್ರಿಯೂ ಆಗಬೇಕು’ ಎಂದರು.</p>.<p>ಶಾಸಕರಾದ ಜಮೀರ್ ಅಹಮದ್ ಖಾನ್, ಮಹಾಂತೇಶ ಕೌಜಲಗಿ ಸೇರಿದಂತೆ ಕಾಂಗ್ರೆಸ್ನ ಹಲವು ಮುಖಂಡರು ಇದ್ದರು.</p>.<p><a href="https://www.prajavani.net/district/dharwad/siddaramaiah-birth-anniversary-will-create-history-zameer-ahmed-957270.html" itemprop="url">ಇತಿಹಾಸ ಸೃಷ್ಟಿಸಲಿದೆ ಸಿದ್ದರಾಮಯ್ಯ ಜನ್ಮದಿನಾಚರಣೆ: ಜಮೀರ್ ಅಹ್ಮದ್ ಖಾನ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ (ಬೆಳಗಾವಿ ಜಿಲ್ಲೆ):</strong> ‘ಜಮೀರ್ ಅಹಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವ ಧರ್ಮೀಯರನ್ನೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಅವರು ಮುಖ್ಯಮಂತ್ರಿ ಆಗುತ್ತಾರೆ’ ಎಂದು ತಾಲ್ಲೂಕಿನ ಯಕ್ಕುಂಡಿ ವಿರಕ್ತಮಠದ ಪಂಚಾಕ್ಷರಿ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಯಕ್ಕುಂಡಿ ಗ್ರಾಮದ ದಿಲಾವರ್ ದರ್ಗಾದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ– ಮುಸ್ಲಿಂ ಭಾವೈಕ್ಯದ ಸಂಕೇತವಾಗಿದೆ. ಈ ದರ್ಗಾಗೆ ಜಮೀರ್ ಅವರು ಬೆಂಗಳೂರಿನಿಂದ ಬಂದಿದ್ದಾರೆ. ಇದರ ಶಕ್ತಿ ಎಷ್ಟಿದೆ ಎನ್ನುವುದನ್ನು ನೀವು ವಿಚಾರ ಮಾಡಬೇಕು. ಈಗಾಗಲೇ ಸಚಿರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಇಂಥ ಒಳ್ಳೆಯ ಮನಸ್ಸು ಇರುವವರು ಮುಂದೆ ಮುಖ್ಯಮಂತ್ರಿ ಆಗಿ ಇನ್ನಷ್ಟು ಕೆಲಸ ಮಾಡಬೇಕು’ ಎಂದೂ ಹೇಳಿದರು.</p>.<p>‘ಇದರ ಜೊತೆಗೆ ಬೈಲಹೊಂಗಲ ಭಾಗದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಮುಂದೆಯೂ ಅವರು ಆರಿಸಿ ಬರಬೇಕು. ಮಂತ್ರಿಯೂ ಆಗಬೇಕು’ ಎಂದರು.</p>.<p>ಶಾಸಕರಾದ ಜಮೀರ್ ಅಹಮದ್ ಖಾನ್, ಮಹಾಂತೇಶ ಕೌಜಲಗಿ ಸೇರಿದಂತೆ ಕಾಂಗ್ರೆಸ್ನ ಹಲವು ಮುಖಂಡರು ಇದ್ದರು.</p>.<p><a href="https://www.prajavani.net/district/dharwad/siddaramaiah-birth-anniversary-will-create-history-zameer-ahmed-957270.html" itemprop="url">ಇತಿಹಾಸ ಸೃಷ್ಟಿಸಲಿದೆ ಸಿದ್ದರಾಮಯ್ಯ ಜನ್ಮದಿನಾಚರಣೆ: ಜಮೀರ್ ಅಹ್ಮದ್ ಖಾನ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>