<p><strong>ಬೆಂಗಳೂರು: </strong>ಕಾಶ್ಮೀರದ ಶ್ರೀನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಿಮಗಡ್ಡೆ ಕುಸಿತಕ್ಕೆ ಸಿಲುಕಿ ಮೃತಪಟ್ಟಿರುವ ಕೊಡಗು ಜಿಲ್ಲೆ ವಿರಾಜಪೇಟೆಯ ಯೋಧ ಅಲ್ತಾಫ್ ಅಹಮ್ಮದ್ ಕುಟುಂಬಕ್ಕೆ ಆರ್ಥಿಕ ನೆರವು ಮತ್ತು ನಿವೇಶನ ನೀಡಬೇಕು ಎಂದು ಕಾಂಗ್ರೆಸ್ನ ಸಿ.ಎಂ. ಇಬ್ರಾಹಿಂ ಸರ್ಕಾರವನ್ನು ಆಗ್ರಹಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಶಿವಮೊಗ್ಗದಲ್ಲಿ ಮೃತಪಟ್ಟ ಹರ್ಷ ಎಂಬ ಯುವಕನ ಕುಟುಂಬಕ್ಕೆ ಸರ್ಕಾರ ₹ 25 ಲಕ್ಷ ನೆರವು ನೀಡಿದೆ. ದೇಶದ ಗಡಿ ಕಾಯುವ ಯೋಧನೊಬ್ಬ ಮೃತಪಟ್ಟಾಗ ಜಿಲ್ಲಾ ಉಸ್ತುವಾರಿ ಸಚಿವರೂ ಗೌರವಿಸಲಿಲ್ಲ. ಅವರ ಕುಟುಂಬಕ್ಕೆ ನೆರವು ನೀಡಿಲ್ಲ’ ಎಂದರು.</p>.<p>‘ಅಲ್ತಾಫ್ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ತಾಯಿ, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಅವರಿಗೂ ನೆರವು ನೀಡಬೇಕು. ವಾಸಿಸಲು ಸರಿಯಾದ ಮನೆ ಇಲ್ಲ. ಒಂದು ನಿವೇಶನವನ್ನೂ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಗೌರವವಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಯವರೇ ಉತ್ತರ ನೀಡುತ್ತಾರೆ’ ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾಶ್ಮೀರದ ಶ್ರೀನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಿಮಗಡ್ಡೆ ಕುಸಿತಕ್ಕೆ ಸಿಲುಕಿ ಮೃತಪಟ್ಟಿರುವ ಕೊಡಗು ಜಿಲ್ಲೆ ವಿರಾಜಪೇಟೆಯ ಯೋಧ ಅಲ್ತಾಫ್ ಅಹಮ್ಮದ್ ಕುಟುಂಬಕ್ಕೆ ಆರ್ಥಿಕ ನೆರವು ಮತ್ತು ನಿವೇಶನ ನೀಡಬೇಕು ಎಂದು ಕಾಂಗ್ರೆಸ್ನ ಸಿ.ಎಂ. ಇಬ್ರಾಹಿಂ ಸರ್ಕಾರವನ್ನು ಆಗ್ರಹಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಶಿವಮೊಗ್ಗದಲ್ಲಿ ಮೃತಪಟ್ಟ ಹರ್ಷ ಎಂಬ ಯುವಕನ ಕುಟುಂಬಕ್ಕೆ ಸರ್ಕಾರ ₹ 25 ಲಕ್ಷ ನೆರವು ನೀಡಿದೆ. ದೇಶದ ಗಡಿ ಕಾಯುವ ಯೋಧನೊಬ್ಬ ಮೃತಪಟ್ಟಾಗ ಜಿಲ್ಲಾ ಉಸ್ತುವಾರಿ ಸಚಿವರೂ ಗೌರವಿಸಲಿಲ್ಲ. ಅವರ ಕುಟುಂಬಕ್ಕೆ ನೆರವು ನೀಡಿಲ್ಲ’ ಎಂದರು.</p>.<p>‘ಅಲ್ತಾಫ್ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ತಾಯಿ, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಅವರಿಗೂ ನೆರವು ನೀಡಬೇಕು. ವಾಸಿಸಲು ಸರಿಯಾದ ಮನೆ ಇಲ್ಲ. ಒಂದು ನಿವೇಶನವನ್ನೂ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಗೌರವವಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಯವರೇ ಉತ್ತರ ನೀಡುತ್ತಾರೆ’ ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>