‘ನಮ್ಮ ತಂದೆ ಎಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಈ ಚುನಾವಣೆ ನಡೆಯಬೇಕಿತ್ತು. ಆದರೆ, ಅನಾರೋಗ್ಯದ ಕಾರಣದಿಂದ ಅವರು ಭಾಗವಹಿಸಲು ಸಾಧ್ಯವಾಗಿಲ್ಲ. 2006ರಲ್ಲಿ ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಿದ್ದರಿಂದ ಅವರು ನೊಂದುಕೊಂಡಿದ್ದರು. ಅದೇ ಅವರ ಆರೋಗ್ಯ ಹದಗೆಡಲು ಕಾರಣವಾಯಿತು. ಈಗ ನಮ್ಮ ಪಕ್ಷ ಸ್ವತಂತ್ರವಾಗಿ ಅಧಿಕಾರ ಹಿಡಿಯಬೇಕು ಎಂಬುದು ತಂದೆಯವರ ಕನಸು. ಎಲ್ಲರೂ ಸೇರಿ ಅದನ್ನು ನನಸು ಮಾಡಬೇಕು’ ಎಂದು ಹೇಳಿದರು.