‘ರವಿ ಆರ್ಎಸ್ಎಸ್ ಸ್ಥಾಪಕನಾ? ಹೆಡಗೇವಾರ್ ಸಹಚರನಾ?’ ಎಂದು ಪ್ರಶ್ನಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಅವರು, ‘ಸಂಘ ಸ್ವಯಂಸೇವಕರಿಗೆ ಹೇಳಿಕೊಟ್ಟಿದ್ದು ದೇಶ ಮೊದಲು ಎನ್ನುವ ತತ್ವವನ್ನು. ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಭಾವವನ್ನು. ಇದು ಅರ್ಥವಾಗಬೇಕಾದರೆ, ಅಸ್ಪೃಶ್ಯತೆಯ, ಜಾತೀಯತೆಯ ಸೋಂಕಿಲ್ಲದೆ ನಾವೆಲ್ಲರೂ ಒಂದು, ಭಾರತಮಾತೆಯ ಮಕ್ಕಳು ಎಂದು ಬದುಕಬೇಕಾದರೆ ನೀವು ಶಾಖೆಗೆ ಬರಬೇಕು’ ಎಂದಿದ್ದಾರೆ.