<p><strong>ಬೆಂಗಳೂರು: </strong>ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಬಯಲುಸೀಮೆ ತಾಲ್ಲೂಕುಗಳ 197 ಕೆರೆಗಳಿಗೆ ನೀರು ತುಂಬಿಸುವ₹1,281.80 ಕೋಟಿ ಯೋಜನೆಗೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.</p>.<p>ಸಚಿವ ಸಂಪುಟ ಸಭೆಯಲ್ಲಿ ಒಟ್ಟು ₹3,500 ಮೊತ್ತದ ವಿವಿಧ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿದಂತಾಗಿದೆ.</p>.<p>ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ಈ ಕೆರೆಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಜಲಾಶಯದಿಂದ ನೀರು ತುಂಬಿಸಲಾಗುವುದು. ತರೀಕೆರೆ ತಾಲ್ಲೂಕಿನ 31, ಕಡೂರಿನ 114, ಚಿಕ್ಕಮಗಳೂರಿನ 48 ಮತ್ತು ಅರಸೀಕೆರೆಯ 4 ಕೆರೆಗಳು ಸೇರಿವೆ. ಇದಕ್ಕಾಗಿ ಭದ್ರಾ ಜಲಾಶಯದಿಂದ 1.45 ಟಿಎಂಸಿ ಅಡಿ ನೀರು ಹರಿಸಲಾಗುವುದು. ಈ ಯೋಜನೆಯನ್ನು ಮೂರು ಹಂತಗಳಲ್ಲಿ ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ. ಮೊದಲನೇ ಹಂತದಲ್ಲಿ ₹406.50 ಕೋಟಿ, ಎರಡನೇ ಹಂತದಲ್ಲಿ ₹298.60 ಕೋಟಿ ಮತ್ತು ಮೂರನೇ ಹಂತದಲ್ಲಿ ₹476.07 ಕೋಟಿ ವೆಚ್ಚ ಮಾಡಲಾಗುವುದು ಎಂದರು.</p>.<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ.ರವಿ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕೆರೆ ತುಂಬಿಸುವ ಯೋಜನೆಯ ಭರವಸೆ ನೀಡಿದ್ದರು.</p>.<p><strong>ಇತರ ನೀರಾವರಿ ಯೋಜನೆಗಳಿಗೆ ಒಪ್ಪಿಗೆ:</strong></p>.<p>* ಮಾರ್ಕಾಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ ಗೋಕಾಕ್ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸಲು ₹995 ಕೋಟಿ ಯೋಜನೆಗೆ ಒಪ್ಪಿಗೆ</p>.<p>* ಹಾರಂಗಿ ಜಲಾನಯನ ಪ್ರದೇಶ ಮತ್ತು ನದಿ ಪಾತ್ರದ ಪುನಶ್ಚೇತನ ಹಾಗೂ ರಕ್ಷಣಾ ಕಾಮಗಾರಿಯ ₹130 ಕೋಟಿ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ</p>.<p>*ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ 5 ಗ್ರಾಮಪಂಚಾಯಿತಿಗಳಲ್ಲಿ ಬರುವ 84 ಸಣ್ಣ ನೀರಾವರಿ, ಜಿಲ್ಲಾ ಪಂಚಾಯತ್ ಕೆರೆಗಳನ್ನು ಬೇಡ್ತಿ ನದಿಯ ಉಪ ನದಿಯಾದ ಕವಳಗಿಹಳ್ಳದಿಂದ ತುಂಬಿಸುವ ₹225 ಕೋಟಿ ಮೊತ್ತದ ಯೋಜನೆಗೆ ಘಟನೋತ್ತರ ಅನುಮೋದನೆ</p>.<p>*ಪಶ್ಚಿಮ ವಾಹಿನಿ ಯೋಜನೆಯಡಿ ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲ್ಲೂಕು ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗವೀರಪೇಟೆಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ₹35 ಕೋಟಿ</p>.<p>*ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕು ಹೆರೂರು ಗ್ರಾಮದ ಬಳಿ ಮಡಿಸಾಲು ಹೊಳೆಗೆ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ₹35 ಕೋಟಿ</p>.<p>*ಬೂದಿಹಾಳ್ ವೀರಾಪುರ ಏತ ನೀರಾವರಿ ಯೋಜನೆಗೆ ₹549 ಕೋಟಿ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ವರ್ಷಕ್ಕೆ ₹244 ಕೋಟಿ ಅನುದಾನ ನಿಗದಿ ಮಾಡಲಾಗಿದೆ</p>.<p>* ಬೆಳಗಾವಿ ಜಿಲ್ಲೆ ಹುಕ್ಕೇರಿಯ 1200 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲು ಅಡವಿ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ₹66.13 ಕೋಟಿ ರೂ</p>.<p>*ಶಿರಸಿ ನಗರಕ್ಕೆ ನೀರು ಪೂರೈಕೆ ಯೋಜನೆಗೆ ₹38.12 ಕೋಟಿ</p>.<p class="Briefhead"><strong>‘ಶಾಲೆಗಳ ಆರಂಭ ಸದ್ಯಕ್ಕೆ ಇಲ್ಲ’</strong></p>.<p>ಶಾಲೆಗಳನ್ನು ತೆರೆಯುವ ತೀರ್ಮಾನ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಸಂಪುಟ ಸಭೆಯಲ್ಲಿ ವ್ಯಕ್ತವಾಯಿತು.</p>.<p>ಈಗ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಈ ಹಂತದಲ್ಲಿ ಶಾಲೆಗಳನ್ನು ತೆರೆಯುವುದರಿಂದ ಸಮಸ್ಯೆ ಆಗಬಹುದು ಎಂದು ಕೆಲವು ಸಚಿವರು ಹೇಳಿದರು. ಅದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮತಿಸಿದರು ಎಂದು ಮೂಲಗಳು ಹೇಳಿವೆ.</p>.<p>ಉಪಚುನಾವಣೆ ಮತ್ತು ವಿಧಾನಪರಿಷತ್ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಯಡಿಯೂರಪ್ಪ ಎಲ್ಲ ಸಚಿವರನ್ನೂ ಅಭಿನಂದಿಸಿದರು. ಮುಂಬರುವ ಉಪಚುನಾವಣೆಗಳಲ್ಲೂ ಇದೇ ಸಾಧನೆ ಮಾಡಬೇಕಾಗಿದೆ ಎಂದು ಹೇಳಿದರು.</p>.<p class="Briefhead"><strong>ಪ್ರಮುಖ ನಿರ್ಣಯಗಳು</strong></p>.<p>* ದೇವದುರ್ಗ (₹13.95 ಕೋಟಿ), ಲಿಂಗಸಗೂರು (₹15.82 ಕೋಟಿ ), ಮತ್ತು ಕುಶಾಲನಗರದಲ್ಲಿ (₹12.50 ಕೋಟಿ ರೂ.) ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ</p>.<p>*ಸಂಸದೀಯ ಕಾರ್ಯದರ್ಶಿ ಸ್ಥಾನಕ್ಕೆ ಅವಕಾಶವಿಲ್ಲ ಎಂಬ ಸುಪ್ರೀಂಕೋರ್ಟ್ ತಿಳಿಸಿರುವ ಕಾರಣ ಆ ಹುದ್ದೆಗೆ ಸಂಬಂಧಿಸಿದ ಕಾನೂನುಗಳನ್ನು ನಿರಸನಗೊಳಿಸಲಾಗಿದೆ</p>.<p>*ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಹೊರಗುತ್ತಿಗೆ ನೀಡಲು ನಿರ್ಧರಿಸಲಾಗಿದೆ</p>.<p>* ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ರೋಬಾಟಿಕ್ ಪಾರ್ಕ್ ಸ್ಥಾಪನೆಗೆ ಅನುಮತಿ</p>.<p>* ಬೆಳಗಾವಿಯಲ್ಲಿ ಬಿಜೆಪಿ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಮೀನು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಬಯಲುಸೀಮೆ ತಾಲ್ಲೂಕುಗಳ 197 ಕೆರೆಗಳಿಗೆ ನೀರು ತುಂಬಿಸುವ₹1,281.80 ಕೋಟಿ ಯೋಜನೆಗೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.</p>.<p>ಸಚಿವ ಸಂಪುಟ ಸಭೆಯಲ್ಲಿ ಒಟ್ಟು ₹3,500 ಮೊತ್ತದ ವಿವಿಧ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿದಂತಾಗಿದೆ.</p>.<p>ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ಈ ಕೆರೆಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಜಲಾಶಯದಿಂದ ನೀರು ತುಂಬಿಸಲಾಗುವುದು. ತರೀಕೆರೆ ತಾಲ್ಲೂಕಿನ 31, ಕಡೂರಿನ 114, ಚಿಕ್ಕಮಗಳೂರಿನ 48 ಮತ್ತು ಅರಸೀಕೆರೆಯ 4 ಕೆರೆಗಳು ಸೇರಿವೆ. ಇದಕ್ಕಾಗಿ ಭದ್ರಾ ಜಲಾಶಯದಿಂದ 1.45 ಟಿಎಂಸಿ ಅಡಿ ನೀರು ಹರಿಸಲಾಗುವುದು. ಈ ಯೋಜನೆಯನ್ನು ಮೂರು ಹಂತಗಳಲ್ಲಿ ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ. ಮೊದಲನೇ ಹಂತದಲ್ಲಿ ₹406.50 ಕೋಟಿ, ಎರಡನೇ ಹಂತದಲ್ಲಿ ₹298.60 ಕೋಟಿ ಮತ್ತು ಮೂರನೇ ಹಂತದಲ್ಲಿ ₹476.07 ಕೋಟಿ ವೆಚ್ಚ ಮಾಡಲಾಗುವುದು ಎಂದರು.</p>.<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ.ರವಿ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕೆರೆ ತುಂಬಿಸುವ ಯೋಜನೆಯ ಭರವಸೆ ನೀಡಿದ್ದರು.</p>.<p><strong>ಇತರ ನೀರಾವರಿ ಯೋಜನೆಗಳಿಗೆ ಒಪ್ಪಿಗೆ:</strong></p>.<p>* ಮಾರ್ಕಾಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ ಗೋಕಾಕ್ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸಲು ₹995 ಕೋಟಿ ಯೋಜನೆಗೆ ಒಪ್ಪಿಗೆ</p>.<p>* ಹಾರಂಗಿ ಜಲಾನಯನ ಪ್ರದೇಶ ಮತ್ತು ನದಿ ಪಾತ್ರದ ಪುನಶ್ಚೇತನ ಹಾಗೂ ರಕ್ಷಣಾ ಕಾಮಗಾರಿಯ ₹130 ಕೋಟಿ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ</p>.<p>*ಉತ್ತರಕನ್ನಡ ಜಿಲ್ಲೆಯ ಮುಂಡಗೋಡು ತಾಲ್ಲೂಕಿನ 5 ಗ್ರಾಮಪಂಚಾಯಿತಿಗಳಲ್ಲಿ ಬರುವ 84 ಸಣ್ಣ ನೀರಾವರಿ, ಜಿಲ್ಲಾ ಪಂಚಾಯತ್ ಕೆರೆಗಳನ್ನು ಬೇಡ್ತಿ ನದಿಯ ಉಪ ನದಿಯಾದ ಕವಳಗಿಹಳ್ಳದಿಂದ ತುಂಬಿಸುವ ₹225 ಕೋಟಿ ಮೊತ್ತದ ಯೋಜನೆಗೆ ಘಟನೋತ್ತರ ಅನುಮೋದನೆ</p>.<p>*ಪಶ್ಚಿಮ ವಾಹಿನಿ ಯೋಜನೆಯಡಿ ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲ್ಲೂಕು ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗವೀರಪೇಟೆಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ₹35 ಕೋಟಿ</p>.<p>*ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕು ಹೆರೂರು ಗ್ರಾಮದ ಬಳಿ ಮಡಿಸಾಲು ಹೊಳೆಗೆ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ₹35 ಕೋಟಿ</p>.<p>*ಬೂದಿಹಾಳ್ ವೀರಾಪುರ ಏತ ನೀರಾವರಿ ಯೋಜನೆಗೆ ₹549 ಕೋಟಿ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ವರ್ಷಕ್ಕೆ ₹244 ಕೋಟಿ ಅನುದಾನ ನಿಗದಿ ಮಾಡಲಾಗಿದೆ</p>.<p>* ಬೆಳಗಾವಿ ಜಿಲ್ಲೆ ಹುಕ್ಕೇರಿಯ 1200 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಲು ಅಡವಿ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ₹66.13 ಕೋಟಿ ರೂ</p>.<p>*ಶಿರಸಿ ನಗರಕ್ಕೆ ನೀರು ಪೂರೈಕೆ ಯೋಜನೆಗೆ ₹38.12 ಕೋಟಿ</p>.<p class="Briefhead"><strong>‘ಶಾಲೆಗಳ ಆರಂಭ ಸದ್ಯಕ್ಕೆ ಇಲ್ಲ’</strong></p>.<p>ಶಾಲೆಗಳನ್ನು ತೆರೆಯುವ ತೀರ್ಮಾನ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಸಂಪುಟ ಸಭೆಯಲ್ಲಿ ವ್ಯಕ್ತವಾಯಿತು.</p>.<p>ಈಗ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಈ ಹಂತದಲ್ಲಿ ಶಾಲೆಗಳನ್ನು ತೆರೆಯುವುದರಿಂದ ಸಮಸ್ಯೆ ಆಗಬಹುದು ಎಂದು ಕೆಲವು ಸಚಿವರು ಹೇಳಿದರು. ಅದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮತಿಸಿದರು ಎಂದು ಮೂಲಗಳು ಹೇಳಿವೆ.</p>.<p>ಉಪಚುನಾವಣೆ ಮತ್ತು ವಿಧಾನಪರಿಷತ್ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಯಡಿಯೂರಪ್ಪ ಎಲ್ಲ ಸಚಿವರನ್ನೂ ಅಭಿನಂದಿಸಿದರು. ಮುಂಬರುವ ಉಪಚುನಾವಣೆಗಳಲ್ಲೂ ಇದೇ ಸಾಧನೆ ಮಾಡಬೇಕಾಗಿದೆ ಎಂದು ಹೇಳಿದರು.</p>.<p class="Briefhead"><strong>ಪ್ರಮುಖ ನಿರ್ಣಯಗಳು</strong></p>.<p>* ದೇವದುರ್ಗ (₹13.95 ಕೋಟಿ), ಲಿಂಗಸಗೂರು (₹15.82 ಕೋಟಿ ), ಮತ್ತು ಕುಶಾಲನಗರದಲ್ಲಿ (₹12.50 ಕೋಟಿ ರೂ.) ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ</p>.<p>*ಸಂಸದೀಯ ಕಾರ್ಯದರ್ಶಿ ಸ್ಥಾನಕ್ಕೆ ಅವಕಾಶವಿಲ್ಲ ಎಂಬ ಸುಪ್ರೀಂಕೋರ್ಟ್ ತಿಳಿಸಿರುವ ಕಾರಣ ಆ ಹುದ್ದೆಗೆ ಸಂಬಂಧಿಸಿದ ಕಾನೂನುಗಳನ್ನು ನಿರಸನಗೊಳಿಸಲಾಗಿದೆ</p>.<p>*ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಹೊರಗುತ್ತಿಗೆ ನೀಡಲು ನಿರ್ಧರಿಸಲಾಗಿದೆ</p>.<p>* ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ರೋಬಾಟಿಕ್ ಪಾರ್ಕ್ ಸ್ಥಾಪನೆಗೆ ಅನುಮತಿ</p>.<p>* ಬೆಳಗಾವಿಯಲ್ಲಿ ಬಿಜೆಪಿ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಮೀನು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>