ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆ| ನಾಳೆ ಹಿರಿಯರ ಜತೆ ಚರ್ಚೆ ನಡೆಸಿ ಖಾತೆ ಹಂಚಿಕೆ: ಬಿಎಸ್‌ವೈ

Last Updated 18 ಜನವರಿ 2021, 9:31 IST
ಅಕ್ಷರ ಗಾತ್ರ

ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಂಗಳವಾರ ಸಂಜೆ ಹಿರಿಯ ಸಚಿವರ ಜತೆ ಚರ್ಚೆ ನಡೆಸಿ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇವತ್ತು ಸಂಜೆ ಉಡುಪಿಗೆ ಹೊರಟಿದ್ದೇನೆ. ಮಂಗಳವಾರ ಮಧ್ಯಾಹ್ನ ವಾ‍ಪಾಸ್‌ ಬಂದ ನಂತರ ಹಿರಿಯ ಸಚಿವರ ಜತೆ ಚರ್ಚಿಸುತ್ತೇನೆ. ಆ ಬಳಿಕ ಸಂಜೆ ಅಥವಾ ಬುಧವಾರ ಯಾರಿಗೆ ಯಾವ ಖಾತೆ ಎಂಬುದನ್ನು ಪ್ರಕಟಿಸುತ್ತೇನೆ ಎಂದು ಅವರು ಹೇಳಿದರು.

ಇತ್ತೀಚೆಗೆ ನೂತನ ಏಳು ಸಚಿವರ ಸೇರ್ಪಡೆ ಆಗಿದ್ದು, ಅವರಿಗೆ ಖಾತೆಗಳನ್ನು ಹಂಚಬೇಕಾಗಿದೆ. ಅಲ್ಲದೆ, ಕೆಲವು ಸಚಿವರ ಖಾತೆಗಳೂ ಬದಲಾವಣೆ ಆಗುವ ಸಾಧ್ಯತೆ. ಇವರಲ್ಲಿ ಕೆಲವರು ಬದಲಿ ಖಾತೆಗಳನ್ನು ಕೇಳಿದ್ದಾರೆ. ಇತ್ತೀಚೆಗೆ ಸಂಪುಟಕ್ಕೆ ಸೇರ್ಪಡೆ ಆದವರಲ್ಲಿ ಕೆಲವರು ಪ್ರಬಲ ಖಾತೆಗಳಿಗೆ ಲಾಬಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT