ಸರ್ಕಾರದ ನಿರ್ಣಯವನ್ನು ವಿರೋಧಿಸಿ ಬಿಜೆಪಿಯ ಕೆಲವು ಶಾಸಕರು ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರಿಗೆ ಪತ್ರ ಬರೆಯುವ ಮೂಲಕ ತೀವ್ರ ಅತೃಪ್ತಿ ಹೊರಹಾಕಿದ್ದರು. ಅಲ್ಲದೆ, ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನೂ ದಾಖಲಿಸಲಾಗಿತ್ತು. ಹೈಕೋರ್ಟ್ ನಿರ್ದೇಶನದ ಅನ್ವಯ ಸಚಿವ ಸಂಪುಟದ ಎಲ್ಲ ಸದಸ್ಯರಿಗೂ ನೋಟಿಸ್ ಜಾರಿ ಮಾಡಲಾಗಿತ್ತು.